Home / Top News / ಅಭಿಷೇಕ ಪಾಟೀಲ ಕೊಲೆ ಆರೋಪಿಗಳ ಬಂಧನ

ಅಭಿಷೇಕ ಪಾಟೀಲ ಕೊಲೆ ಆರೋಪಿಗಳ ಬಂಧನ

Spread the love

ಹುಬ್ಬಳ್ಳಿ: ಭಾರತೀಯ ಜನತಾ ಪಕ್ಷದ ಮುಖಂಡರೋರ್ವರ ಸಂಬಂಧಿಯನ್ನು ಹತ್ಯೆ ಮಾಡಿ ಪರಾರಿಯಾಗಿದ್ದ ಕೊಲೆಗೆಡುಕರನ್ನು ಮೂರೇ ಗಂಟೆಯಲ್ಲಿ ಹಿಡಿಯುವಲ್ಲಿ ಎಸಿಪಿ ವಿನೋದ ಮುಕ್ತೆದಾರ ಪಡೆ ಯಶಸ್ವಿಯಾಗಿದೆ.

ಭಾರತೀಯ ಜನತಾ ಪಕ್ಷದ ರೈತ ಮೋರ್ಚಾ ಜಿಲ್ಲಾಧ್ಯಕ್ಷ ಈಶ್ವರಗೌಡ ಪಾಟೀಲ ಅವರ ಚಿಕ್ಕಪ್ಪನ ಮಗ ಅಭಿಷೇಕಗೌಡ ಪಾಟೀಲ ಎಂಬುವವರನ್ನು ಚಾಕುವಿನಿಂದ ಇರಿದು ಕೊಲೆ ಮಾಡಲಾಗಿತ್ತು.

ಕೊಲೆ ಮಾಡಿ ಪರಾರಿಯಾದ ಪ್ರವೀಣ ಬೇವಿನಕಟ್ಟಿ, ಸಾಯಿ ಉಣಕಲ್ ಹಾಗೂ ಕುಮಾರ ಇದ್ದಲಗಿ ಎಂಬುವವರನ್ನು ಎಸಿಪಿ ವಿನೋದ ಮುಕ್ತೆದಾರ ನೇತೃತ್ವದ ತಂಡ ಮೂರೇ ಗಂಟೆಯಲ್ಲಿ ಹಿಡಿಯುವಲ್ಲಿ ಯಶಸ್ವಿಯಾಗಿದೆ.

ಕೆಲವು ದಿನಗಳ ಹಿಂದೆ ಅಭಿಷೇಕನೊಂದಿಗೆ ಜಗಳವಾಡಿದ್ದ ಪ್ರವೀಣ ಬೇವಿನಕಟ್ಟಿ, ಪಾಟೀಲರ ಮನೆಯ ಮುಂದಿನ ಕಾರಿನ ಗಾಜನ್ನು ಒಡೆದು ಹೋಗಿದ್ದ. ಅದೇ ವಿಷಯವಾಗಿ ಇಬ್ಬರ ನಡುವೆ ಜಗಳವಾಗುತ್ತಿತ್ತು. ಅದೇ ಕಾರಣದಿಂದಲೇ ನಿನ್ನೆಯೂ ಕೂಡಾ ಜಗಳವಾಗಿದೆ. ತಕ್ಷಣವೇ ಸಾಯಿ ಮತ್ತು ಕುಮಾರನನ್ನು ಕಳಿಸಿ ಕೊಲೆ ಮಾಡಿಸಿದ್ದಾನೆಂದು ಗೊತ್ತಾಗಿದೆ.

ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ ಎಸಿಪಿ ವಿನೋದ ಮುಕ್ತೆದಾರ ತಂಡವೂ ತಕ್ಷಣವೇ ಕಾರ್ಯಪ್ರವೃತ್ತರಾಗಿ ಮೂರೇ ಗಂಟೆಯಲ್ಲಿ ಹಿಡಿದು, ಪೊಲೀಸರೆಂದರೇನು ಎಂದು ತೋರಿಸಿಕೊಟ್ಟಿದ್ದಾರೆ.
ಅಶೋಕನಗರದಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮತ್ತಷ್ಟು ಮಾಹಿತಿಯನ್ನ ಕಲೆ ಹಾಕುತ್ತಿದ್ದಾರೆ.

About Santosh Naregal

Check Also

ಪ್ರಜ್ವಲ್ ಫೆನ್ ಡ್ರೈವ್ ಪ್ರಕರಣ ಸಂತ್ರಸ್ತರಿಗೆ ನ್ಯಾಯ ಸಿಗುವಂತಾಗಬೇಕು : ಮಾಜಿ ಸಿಎಂ ಬೊಮ್ಮಾಯಿ

Spread the loveಹುಬ್ಬಳ್ಳಿ : ಪ್ರಜ್ವಲ್ ರೇವಣ್ಣ ಫೆನ್ ಡ್ರೈವ್ ಪ್ರಕರಣದಲ್ಲಿ ನಿಷ್ಪಕ್ಷಪಾತ ತನಿಖೆ ನಡೆಯಬೇಕು. ಸಂತ್ರಸ್ತರಿಗೆ ನ್ಯಾಯ ಸಿಗುವಂತಾಗಬೇಕು …

Leave a Reply

Your email address will not be published. Required fields are marked *

[the_ad id="389"]