Home / Top News / ಶಿರ್ಲೆ ಫಾಲ್ಸ್ ನಲ್ಲಿ ಕಾಣೆಯಾಗಿದ್ದ ಹುಬ್ಬಳ್ಳಿಯ ಆರು ಯುವಕರು ಕಾಡಿನಲ್ಲಿ ಪತ್ತೆ

ಶಿರ್ಲೆ ಫಾಲ್ಸ್ ನಲ್ಲಿ ಕಾಣೆಯಾಗಿದ್ದ ಹುಬ್ಬಳ್ಳಿಯ ಆರು ಯುವಕರು ಕಾಡಿನಲ್ಲಿ ಪತ್ತೆ

Spread the love

ಹುಬ್ಬಳ್ಳಿ : ಇಲ್ಲಿನ ನವನಗರದಿಂದ ಪ್ರವಾಸ ಸ್ಥಳ ನೋಡಲು ಬಂದಿದ್ದ ಆರು ಜನ ಯುವಕರು ನಿನ್ನೆಯಿಂದಲೇ ನಾಪತ್ತೆಯಾಗಿರುವ ಘಟನೆ ಶಿರ್ಲೆ ಫಾಲ್ಸ್‌ ನಲ್ಲಿ ನಡೆದಿತ್ತು. ಆದರೆ ಅದೃಷ್ಟವಶಾತ್ ಯುವಕರು ಯಲ್ಲಾಪುರ ಕಾಡಿನಲ್ಲಿ ಪತ್ತೆಯಾಗಿದ್ದು, ಸುರಕ್ಷಿತವಾಗಿ ಯಲ್ಲಾಪುರ ಪೊಲೀಸ್ ಠಾಣೆಗೆ ಕರೆತರಲಾಯಿತು.

ಹೌದು.. ನವನಗರದಿಂದ ಹೋಗಿದ್ದ ಆಸೀಫ ಮಕಬುಲಸಾಬ ಡಾಲಾಯಿತ್, ಅಹ್ಮದ ಸೈಯ್ಯದ ಶೇಖ, ಅಬತಾಬ್ ಸದ್ದಾಂ ಶಿರಹಟ್ಟಿ, ಮಾಬುಸಾಬ ಮಕಬುಲಸಾಬ ಶಿರಹಟ್ಟಿ, ಶಾನು ಬಿಜಾಪುರಿ ಹಾಗೂ ಇಮ್ತಿಯಾಜ್ ನೀರಸಾಬ ಮುಲ್ಲಾನವರ ಎಂಬುವವರೇ ಕಾಡಿನಲ್ಲಿ ಪತ್ತೆಯಾಗಿದ್ದಾರೆ.

ಇನ್ನೂ ಯಲ್ಲಾಪುರ ಸಮೀಪದ ಶಿರ್ಲೆ ಪಾಲ್ಸ್ ಬಳಿಯಲ್ಲಿ ಇವರ ಮೂರು ಸ್ಕೂಟಿಗಳು ಸಿಕ್ಕಿದ್ದು, ಯುವಕರು ನಾಪತ್ತೆಯಾಗಿದ್ದಾರೆ ಎಂದು ಕುಟುಂಬದವರು ಆತಂಕಗೊಂಡಿದ್ದು, ಯುವಕರು ಸುರಕ್ಷಿತವಾಗಿರುವ ಸುದ್ಧಿ ಕೇಳಿ‌ ನಿಟ್ಟುಸಿರು ಬಿಟ್ಟಿದ್ದಾರೆ.

About Santosh Naregal

Check Also

ಪ್ರಜ್ವಲ್ ಫೆನ್ ಡ್ರೈವ್ ಪ್ರಕರಣ ಸಂತ್ರಸ್ತರಿಗೆ ನ್ಯಾಯ ಸಿಗುವಂತಾಗಬೇಕು : ಮಾಜಿ ಸಿಎಂ ಬೊಮ್ಮಾಯಿ

Spread the loveಹುಬ್ಬಳ್ಳಿ : ಪ್ರಜ್ವಲ್ ರೇವಣ್ಣ ಫೆನ್ ಡ್ರೈವ್ ಪ್ರಕರಣದಲ್ಲಿ ನಿಷ್ಪಕ್ಷಪಾತ ತನಿಖೆ ನಡೆಯಬೇಕು. ಸಂತ್ರಸ್ತರಿಗೆ ನ್ಯಾಯ ಸಿಗುವಂತಾಗಬೇಕು …

Leave a Reply

Your email address will not be published. Required fields are marked *

[the_ad id="389"]