Home / ಪ್ರಮುಖ ನಗರಗಳು / ಹುಬ್ಬಳ್ಳಿ , ಧಾರವಾಡ / ಎಲ್ಲರೂ ಬಿಟ್ಟಿರುವ ಖಾತೆಯನ್ನು ಕೊಟ್ಟರೂ ಚೆನ್ನಾಗಿ ನಿರ್ವಹಿಸುತ್ತೇನೆ: ಸಚಿವ ಮುರಗೇಶ ನಿರಾಣಿ

ಎಲ್ಲರೂ ಬಿಟ್ಟಿರುವ ಖಾತೆಯನ್ನು ಕೊಟ್ಟರೂ ಚೆನ್ನಾಗಿ ನಿರ್ವಹಿಸುತ್ತೇನೆ: ಸಚಿವ ಮುರಗೇಶ ನಿರಾಣಿ

Spread the love

ಹುಬ್ಬಳ್ಳಿ : ನೂತನವಾಗಿ ರಾಜ್ಯದಲ್ಲಿ ಮಂತ್ರಿಮಂಡಲ ರಚನೆಯಾಗಿದೆ. ನಾನು ಮತ್ತು ಶಂಕರ ಪಾಟೀಲ ಮುನೇನಕೊಪ್ಪ ಇಬ್ಬರೂ ಮುಂಬರುವ ದಿನಗಳಲ್ಲಿ ಉತ್ತಮವಾದ ಕೆಲಸವನ್ನು ಮಾಡುತ್ತೇವೆ. ಯಾವುದೇ ಖಾತೆಯನ್ನು ಕೊಟ್ಟರೂ ಚೆನ್ನಾಗಿ ನಿಭಾಯಿಸುತ್ತೇನೆ ಎಂದು ನೂತನ ಸಚಿವ ಮುರಗೇಶ್ ನಿರಾಣಿ ಹೇಳಿದರು.

ನಗರದ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ನೂತನವಾಗಿ ಮಂತ್ರಿ ಮಂಡಲ ರಚನೆಯಾಗಿದೆ. ಜಗದೀಶ್ ಶೆಟ್ಟರ್ ಮತ್ತು ಯಡಿಯೂರಪ್ಪರ ನೇತೃತ್ವದಲ್ಲಿ ಉತ್ತಮ ಕೆಲಸ ಮಾಡುತ್ತೇವೆ ಎಂದರು.

ಎಲ್ಲರೂ ಬಿಟ್ಟಿರುವ ಖಾತೆಯನ್ನು ನನಗೆ ಕೊಟ್ಟರು ನಾನು ನಿರ್ವಹಿಸುತ್ತೇನೆ. ನನಗೆ ಇದೆ ಖಾತೆ ಬೇಕು ಅಂತ ಏನು ಇಲ್ಲ. ಯಾವುದನ್ನು ಕೊಟ್ಟರು ಸರಿಯಾಗಿ ನಿರ್ವಹಣೆ ಮಾಡುತ್ತೇನೆ ಎಂದು ಅವರು ಹೇಳಿದರು.

About Santosh Naregal

Check Also

ಪ್ರಜ್ವಲ್ ಫೆನ್ ಡ್ರೈವ್ ಪ್ರಕರಣ ಸಂತ್ರಸ್ತರಿಗೆ ನ್ಯಾಯ ಸಿಗುವಂತಾಗಬೇಕು : ಮಾಜಿ ಸಿಎಂ ಬೊಮ್ಮಾಯಿ

Spread the loveಹುಬ್ಬಳ್ಳಿ : ಪ್ರಜ್ವಲ್ ರೇವಣ್ಣ ಫೆನ್ ಡ್ರೈವ್ ಪ್ರಕರಣದಲ್ಲಿ ನಿಷ್ಪಕ್ಷಪಾತ ತನಿಖೆ ನಡೆಯಬೇಕು. ಸಂತ್ರಸ್ತರಿಗೆ ನ್ಯಾಯ ಸಿಗುವಂತಾಗಬೇಕು …

Leave a Reply

Your email address will not be published. Required fields are marked *

[the_ad id="389"]