Home / ಪ್ರಮುಖ ನಗರಗಳು / ಹುಬ್ಬಳ್ಳಿ , ಧಾರವಾಡ / ಕರ್ಕಿ ಬಸವೇಶ್ವರ ನಗರದಲ್ಲಿ ನಡೆದ ಜಗಳ ರಾಜಕೀಯ ಪ್ರೇರಿತವಲ್ಲ : ಶ್ರೀನಿವಾಸ್ ಬೆಳದಡಿ

ಕರ್ಕಿ ಬಸವೇಶ್ವರ ನಗರದಲ್ಲಿ ನಡೆದ ಜಗಳ ರಾಜಕೀಯ ಪ್ರೇರಿತವಲ್ಲ : ಶ್ರೀನಿವಾಸ್ ಬೆಳದಡಿ

Spread the love

ಹುಬ್ಬಳ್ಳಿ : ಕರ್ಕಿ ಬಸವೇಶ್ವರ ನಗರದಲ್ಲಿ ನಡೆದ ಘಟನೆ ಯಾವುದೇ ರಾಜಕೀಯ ಪ್ರೇರಿತವಲ್ಲ. ವಿಜಯ ಗುಂಟ್ರಾಳ ನಮ್ಮ ಜನಪ್ರಿಯತೆ ಸಹಿಸಿಕೊಳ್ಳಲಾಗದೇ ಇಲ್ಲಸಲ್ಲದ ಆರೋಪ ಮಾಡುತ್ತಿದ್ದಾರೆ ಎಂದು ಶ್ರೀನಿವಾಸ್ ಬೆಳದಡಿ ಹೇಳಿದರು.

ನಗರದಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪಾಲಿಕೆ ಚುನಾವಣೆ ಫಲಿತಾಂಶದ ದಿನದಂದು ಓಣಿಯ ಚಿಕ್ಕ ಮಕ್ಕಳು ಗಲಾಟೆ ಮಾಡಿರುವುದನ್ನೇ ಇಟ್ಟುಕೊಂಡು ನನ್ನ ಮೇಲೆ ಇಲ್ಲಸಲ್ಲದ ಆರೋಪ ಮಾಡಿ ನನ್ನ ಒಳಗೊಂಡು ಅಮಾಯಕ 16 ಜನರ ಮೇಲೆ ದೂರು ದಾಖಲು ಮಾಡಿದ್ದಾರೆ. ಈ ಬಗ್ಗೆ ಜಾಮೀನು ಸಹಿತ ಪಡೆದಿದ್ದೇನೆ. ನಾನು ಕೂಡಾ ಪ್ರತಿದೂರು ದಾಖಲಿಸಿದ್ದೇನೆ.‌ ಪೋಲಿಸರು ಈ ಬಗ್ಗೆ ಸೂಕ್ತ ತನಿಖೆ ಕೈಕೊಳ್ಳಬೇಕು ಎಂದರು.

ಇನ್ನು, ಚುನಾವಣೆಯಲ್ಲಿ ಸೋಲು ಗೆಲುವು ಸಹಜ, ಜನರು ನೀಡಿರುವ ತೀರ್ಪನ್ನು ನಾವು ಒಪ್ಪಿಕೊಳ್ಳಲೇಬೇಕು. ನನಗೆ ಯಾವುದೇ ಹಲ್ಲೇ, ಜಗಳ ಮಾಡುವ ಉದ್ದೇಶವಿಲ್ಲ. ಈ ನಿಟ್ಟಿನಲ್ಲಿ ನಾನು ಜನರೊಂದಿಗೆ ಒಡನಾಟ ಇಟ್ಟುಕೊಂಡು ಬರುವ ಚುನಾವಣೆ ಎದುರಿಸಲು ಸಿದ್ದಗೊಳ್ಳುತ್ತಿದ್ದೇನೆ ಎಂದರು.

ಸುದ್ದಿಗೋಷ್ಠಿಯಲ್ಲಿ ಸುಭಾಶ ಗುಡಿಹಾಳ, ವಿನಾಯಕ ಪೂಜಾರ ಇದ್ದರು.

About Santosh Naregal

Check Also

ಪ್ರಜ್ವಲ್ ಫೆನ್ ಡ್ರೈವ್ ಪ್ರಕರಣ ಸಂತ್ರಸ್ತರಿಗೆ ನ್ಯಾಯ ಸಿಗುವಂತಾಗಬೇಕು : ಮಾಜಿ ಸಿಎಂ ಬೊಮ್ಮಾಯಿ

Spread the loveಹುಬ್ಬಳ್ಳಿ : ಪ್ರಜ್ವಲ್ ರೇವಣ್ಣ ಫೆನ್ ಡ್ರೈವ್ ಪ್ರಕರಣದಲ್ಲಿ ನಿಷ್ಪಕ್ಷಪಾತ ತನಿಖೆ ನಡೆಯಬೇಕು. ಸಂತ್ರಸ್ತರಿಗೆ ನ್ಯಾಯ ಸಿಗುವಂತಾಗಬೇಕು …

Leave a Reply

Your email address will not be published. Required fields are marked *

[the_ad id="389"]