Home / Top News / ಮೃತ ಸುನೀಲ ಕುಟುಂಬಕ್ಕೆ ಪರಿಹಾರ ಚೆಕ್‌ ವಿತರಣೆ

ಮೃತ ಸುನೀಲ ಕುಟುಂಬಕ್ಕೆ ಪರಿಹಾರ ಚೆಕ್‌ ವಿತರಣೆ

Spread the love

ಹುಬ್ಬಳ್ಳಿ : ಬೈಕ್ ಅಪಘಾತದಲ್ಲಿ ಮೃತಪಟ್ಟ ಖಾಸಗಿ ಸುದ್ದಿ ವಾಹಿನಿಯ ಕ್ಯಾಮರಾಮೆನ್ ಸುನಿಲ ಗೋಪಾಲ ಪಾಚಂಗಿ ಕುಟುಂಬಸ್ಥರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಗುರುವಾರ 5 ಲಕ್ಷ ರೂ. ಪರಿಹಾರ ಧನದ ಚೆಕ್‌ ವಿತರಿಸಿದರು.

ಸುನೀಲ ಪಾಚಂಗೆ ಒಂದೂವರೆ ವರ್ಷದ ಹಿಂದೆ ಇಲ್ಲಿನ ಚಟ್ನಿ ಕಾಂಪ್ಲೆಕ್ಸ್ ಬಳಿ ಬೈಕ್ ಅಪಘಾತದಲ್ಲಿ ತಲೆಗೆ ಗಂಭೀರವಾಗಿ ಗಾಯಗೊಂಡು ಮೃತಪಟ್ಟಿದ್ದರು. ಇವರ ನಿಧನದ ಹಿನ್ನೆಲೆ ಆಗಿನ ಮುಖ್ಯಮಂತ್ರಿ ಆಗಿದ್ದ ಬಿ.ಎಸ್.ಯಡಿಯೂರಪ್ಪ ಅವರು ಸಿಎಂ ಪರಿಹಾರ ನಿಧಿಯಿಂದ ಪರಿಹಾರ ಧನ ನೀಡುವ ಭರವಸೆ ನೀಡಿದರು. ಅದರಂತೆ ಇಂದು ಸಿಎಂ ಬಸವರಾಜ ಬೊಮ್ಮಾಯಿ ಅವರು ಮೃತನ ತಾಯಿ ಉಮಾ ಪಾಚಂಗೆ ಅವರಿಗೆ ಪರಿಹಾರ ಧನದ ಚೆಕ್ ನ್ನು ಹಸ್ತಾಂತರ ಮಾಡಿದರು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ನಿತೇಶ ಪಾಟೀಲ್, ಹುಬ್ಬಳ್ಳಿ ನಗರ ತಹಶಿಲ್ದಾರರ ಶಶಿಧರ ಮಾಡ್ಯಾಳ,ಕಂದಾಯ ನಿರೀಕ್ಷಕ ರವಿ ಎಸ್ ಬೆನ್ನೂರು, ಹಳೆ ಹುಬ್ಬಳ್ಳಿ ಗ್ರಾಮ ಲೆಕ್ಕಾಧಿಕಾರಿ ವಿಜಯ ಕುಮಾರ ಬಿ ಎಸ್, ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಗಣಪತಿ ಗಂಗೊಳ್ಳಿ, ಪತ್ರಕರ್ತ ಸುರೇಶ ನಾಯಕ, ರೋಹನ್ ಹುನಸವಾಡಕರ ಇದ್ದರು.

About Santosh Naregal

Check Also

ಪ್ರಜ್ವಲ್ ಫೆನ್ ಡ್ರೈವ್ ಪ್ರಕರಣ ಸಂತ್ರಸ್ತರಿಗೆ ನ್ಯಾಯ ಸಿಗುವಂತಾಗಬೇಕು : ಮಾಜಿ ಸಿಎಂ ಬೊಮ್ಮಾಯಿ

Spread the loveಹುಬ್ಬಳ್ಳಿ : ಪ್ರಜ್ವಲ್ ರೇವಣ್ಣ ಫೆನ್ ಡ್ರೈವ್ ಪ್ರಕರಣದಲ್ಲಿ ನಿಷ್ಪಕ್ಷಪಾತ ತನಿಖೆ ನಡೆಯಬೇಕು. ಸಂತ್ರಸ್ತರಿಗೆ ನ್ಯಾಯ ಸಿಗುವಂತಾಗಬೇಕು …

Leave a Reply

Your email address will not be published. Required fields are marked *

[the_ad id="389"]