Home / Top News / ಪಕ್ಷೇತರರಿಂದ ಯಾವುದೇ ನಷ್ಟವಿಲ್ಲ ಬಿಜೆಪಿ ಗೆಲುವು ನಿಶ್ಚಿತ: ಶೆಟ್ಟರ್ ವಿಶ್ವಾಸ

ಪಕ್ಷೇತರರಿಂದ ಯಾವುದೇ ನಷ್ಟವಿಲ್ಲ ಬಿಜೆಪಿ ಗೆಲುವು ನಿಶ್ಚಿತ: ಶೆಟ್ಟರ್ ವಿಶ್ವಾಸ

Spread the love

ಹುಬ್ಬಳ್ಳಿ : ಭಾರತೀಯ ಜನತಾ ಪಕ್ಷಕ್ಕೆ ಪಕ್ಷೇತರ ಅಭ್ಯರ್ಥಿಗಳಿಂದ ಯಾವುದೇ ಹಾನಿಯಾಗುವುದಿಲ್ಲ. ಪರಿಷತ್ ಚುನಾವಣೆಯಲ್ಲಿ 15ಕ್ಕೂ ಹೆಚ್ಚು ಸ್ಥಾನವನ್ನು ಬಿಜೆಪಿ ಗೆಲ್ಲಲಿದೆ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿದರು.

ನಗರದಲ್ಲಿಂದು ಪರಿಷತ್ ಚುನಾವಣೆ ಮತದಾನದ ಬಳಿಕ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಪಕ್ಷೇತರ ಅಭ್ಯರ್ಥಿಗಳಿಂದ ಬಿಜೆಪಿಗೆ ಯಾವುದೇ ಹಾನಿಯಿಲ್ಲ. ಅಲ್ಲದೇ ಧಾರವಾಡ, ಗದಗ ಹಾಗೂ ಹಾವೇರಿಯಲ್ಲಿ ಬಿಜೆಪಿ ಅಭ್ಯರ್ಥಿ ಪ್ರದೀಪ ಶೆಟ್ಟರ್ ಪ್ರಚಂಡ ಬಹುಮತವನ್ನು ಪಡೆದುಕೊಂಡು ಗೆಲವು ಸಾಧಿಸುವುದು ನಿಶ್ಚಿತ ಎಂದರು.

ಧಾರವಾಡ ಮತ್ತು ಗದಗ ಕ್ಷೇತ್ರಕ್ಕಿಂತ ಹಾವೇರಿಯಲ್ಲಿಯೇ ಪ್ರದೀಪ ಶೆಟ್ಟರ್ ಹೆಚ್ಚಿನ ಮತವನ್ನು ಪಡೆದುಕೊಳ್ಳುತ್ತಾರೆ. ಅಲ್ಲದೇ ಈಗಾಗಲೇ ಜಿಲ್ಲಾವಾರು ಮಾಹಿತಿಯನ್ನು ಶಾಸಕರಿಂದ ಕಲೆ ಹಾಕಲಾಗಿದ್ದು, ಎಲ್ಲೆಡೆಯೂ ಬಿಜೆಪಿಗೆ ಬೆಂಬಲ ಇದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

About Santosh Naregal

Check Also

ಪ್ರಜ್ವಲ್ ಫೆನ್ ಡ್ರೈವ್ ಪ್ರಕರಣ ಸಂತ್ರಸ್ತರಿಗೆ ನ್ಯಾಯ ಸಿಗುವಂತಾಗಬೇಕು : ಮಾಜಿ ಸಿಎಂ ಬೊಮ್ಮಾಯಿ

Spread the loveಹುಬ್ಬಳ್ಳಿ : ಪ್ರಜ್ವಲ್ ರೇವಣ್ಣ ಫೆನ್ ಡ್ರೈವ್ ಪ್ರಕರಣದಲ್ಲಿ ನಿಷ್ಪಕ್ಷಪಾತ ತನಿಖೆ ನಡೆಯಬೇಕು. ಸಂತ್ರಸ್ತರಿಗೆ ನ್ಯಾಯ ಸಿಗುವಂತಾಗಬೇಕು …

Leave a Reply

Your email address will not be published. Required fields are marked *

[the_ad id="389"]