ಹುಬ್ಬಳ್ಳಿ : ಮಾಜಿ ಸಭಾಪತಿ ರಮೇಶ ಕುಮಾರ ಮಹಿಳೆಯರ ಕುರಿತು ಅವಹೇಳನಕಾರಿ ಹೇಳಿಕೆ ಖಂಡಿಸಿ ಬಿಜೆಪಿಯವರು ಮಹಿಳಾ ಬೋರ್ಚಾ ನಗರದಲ್ಲಿಂದು ಪ್ರತಿಭಟನೆ ನಡೆಸಿದರು.
ಇಲ್ಲಿನ ಮೂರು ಸಾವಿರ ಮಠದ ಆವರಣದ ಮುಂಭಾಗದ ರಸ್ತೆಯಲ್ಲಿ ಪ್ರತಿಭಟನೆ ಮಾಡಿದ ಅವರು, ರಮೇಶ ಕುಮಾರ ಹೇಳಿಕೆ “ಅತ್ಯಂತ ದುಃಖಕರ, ದುರದೃಷ್ಟದ ಹೇಳಿಕೆಯಾಗಿದೆ. ದೇಶವು ಇನ್ನೂ ಸ್ತ್ರೀದ್ವೇಷ ಹೊಂದಿರುವ ಸಾರ್ವಜನಿಕ ಪ್ರತಿನಿಧಿಗಳನ್ನು ಹೊಂದಿದೆ. ಸದನದಲ್ಲಿ ಕುಳಿತು ಈ ರೀತಿ ಹೇಳಿಕೆ ನೀಡುವುದಾದರೆ ಅವರೊಂದಿಗಿರುವ ಮಹಿಳೆಯರೊಂದಿಗೆ ಯಾವ ರೀತಿ ಅವರು ವರ್ತಿಸುತ್ತಾರೆ. ಕೂಡಲೇ ರಮೇಶ ಕುಮಾರ್ ಅವರು ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ಧಾರವಾಡ ಗ್ರಾಮಾಂತರ ಜಿಲ್ಲೆಯ ಮಹಿಳಾ ಮೋರ್ಚಾ ಅಧ್ಯಕ್ಷ ಚೈತ್ರಾ ಶಿರೂರ, ಸುಜಾತಾ ಕಳ್ಳಿಮನಿ, ರೂಪಾ ಶೆಟ್ಟಿ, ಮೀನಾಕ್ಷಿ ಒಂಟಮೊರೆ, ಅಕ್ಕಮಹಾದೇವಿ ಹೆಗಡೆ, ಉಮಾ ಮುಕ್ಕುಂದ ಸೇರಿದಂತೆ ಮುಂತಾದವರು ಇದ್ದರು.