Home / Top News / ರಸ್ತೆ ತಗ್ಗು ಗುಂಡಿ ಮುಚ್ಚುವಂತೆ ಆಗ್ರಹಿಸಿ ಕಾಂಗ್ರೆಸ್ ಕಾರ್ಯಕರ್ತರಿಂದ ವಿನೂತನ ಪ್ರತಿಭಟನೆ

ರಸ್ತೆ ತಗ್ಗು ಗುಂಡಿ ಮುಚ್ಚುವಂತೆ ಆಗ್ರಹಿಸಿ ಕಾಂಗ್ರೆಸ್ ಕಾರ್ಯಕರ್ತರಿಂದ ವಿನೂತನ ಪ್ರತಿಭಟನೆ

Spread the love

ಹುಬ್ಬಳ್ಳಿ : ಹು-ಧಾ ಮಹಾನಗರ ನಗರದಲ್ಲಿ ಹದಗೆಟ್ಟಿರುವ ರಸ್ತೆಗಳ ದುರಸ್ತಿ ಹಾಗೂ ನಗರದೆಲ್ಲೆಡೆ ತೆರೆದುಕೊಂಡಿರುವ ಗುಂಡಿಗಳನ್ನು ಕೂಡಲೇ ಮುಚ್ಚಬೇಕೆಂದು ಒತ್ತಾಯಿಸಿ ಹು-ಧಾ ಮಹಾನಗರ ಜಿಲ್ಲಾ ಕಾಂಗ್ರೆಸ್ ವಿನೂತನ ಪ್ರತಿಭಟನೆ ನಡೆಸಿದರು.

ನಗರದ ಕೊಪ್ಪಿಕರ ರಸ್ತೆಯ ಮಧ್ಯದಲ್ಲಿ ಹೋಮ ಕುಂಡ ನಿರ್ಮಿಸಿ, ಸಂಕಲ್ಪ ಗಣಹೋಮ ಮಾಡುವ ಮೂಲಕ ವಿನೂತನ ಪ್ರತಿಭಟನೆ ಮಾಡಿದರು. ಈ ವೇಳೆ ಇಬ್ಬರು ಅರ್ಚಕರಿಂದ ಮಂತ್ರಘೋಷ ಪಟಣದ ಮೂಲಕ ಶಾಸ್ತ್ರೋಕ್ತವಾಗಿ ಗಣಹೋಮ‌ ನೆರವೇರಿಸಿದರು.

ಪ್ರತಿಭಟನೆಯಲ್ಲಿ ಪಾಲಿಕೆ ಸದಸ್ಯರಾದ ಸುವರ್ಣಲತಾ ಮಣಿಕುಂಟ್ಲಾ, ಸಂದೀಲ್ ಕುಮಾರ್, ಪಕ್ಷದ ಮುಖಂಡರಾದ ಇಮ್ತಿಯಾಜ್ ಮಣಿಯಾರ್, ಪ್ರಕಾಶ ಕುರಹಟ್ಟಿ, ಬಸವರಾಜ ಸೇರಿದಂತೆ ಮುಂತಾದವರು ಇದ್ದರು.

About Santosh Naregal

Check Also

ಪ್ರಜ್ವಲ್ ಫೆನ್ ಡ್ರೈವ್ ಪ್ರಕರಣ ಸಂತ್ರಸ್ತರಿಗೆ ನ್ಯಾಯ ಸಿಗುವಂತಾಗಬೇಕು : ಮಾಜಿ ಸಿಎಂ ಬೊಮ್ಮಾಯಿ

Spread the loveಹುಬ್ಬಳ್ಳಿ : ಪ್ರಜ್ವಲ್ ರೇವಣ್ಣ ಫೆನ್ ಡ್ರೈವ್ ಪ್ರಕರಣದಲ್ಲಿ ನಿಷ್ಪಕ್ಷಪಾತ ತನಿಖೆ ನಡೆಯಬೇಕು. ಸಂತ್ರಸ್ತರಿಗೆ ನ್ಯಾಯ ಸಿಗುವಂತಾಗಬೇಕು …

Leave a Reply

Your email address will not be published. Required fields are marked *

[the_ad id="389"]