Home / ಪ್ರಮುಖ ನಗರಗಳು / ಹುಬ್ಬಳ್ಳಿ , ಧಾರವಾಡ / ಹುಬ್ಬಳ್ಳಿ – ಧಾರವಾಡ ಮಹಾನಗರ ಪಾಲಿಕೆ ಚುನಾವಣೆ ಅಸಿಂಧುಗೊಳಿಸಲು ಸಂವಿಧಾನ ರಕ್ಷಿಸಿ ವೇದಿಕೆ ಆಗ್ರಹ

ಹುಬ್ಬಳ್ಳಿ – ಧಾರವಾಡ ಮಹಾನಗರ ಪಾಲಿಕೆ ಚುನಾವಣೆ ಅಸಿಂಧುಗೊಳಿಸಲು ಸಂವಿಧಾನ ರಕ್ಷಿಸಿ ವೇದಿಕೆ ಆಗ್ರಹ

Spread the love

 

ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಚುನಾವಣೆ ಅಸಿಂಧುಗೊಳಿಸಬೇಕು ಸೆಪ್ಟೆಂಬರ್ ತಿಂಗಳಲ್ಲಿ ನಡೆದ ಚುನಾವಣೆ ಸಂವಿಧಾನಬದ್ಧವಾಗಿ ನಡೆದಿಲ್ಲ
ವಾರ್ಡ್ ವಿಂಗಡಣೆ, ಮೀಸಲಾತಿ ಇತ್ಯಾದಿಗಳ ಸಂವಿಧಾನಬದ್ಧವಾಗಿ ನಡೆದಿಲ್ಲ
ಈ ಕುರಿತು ಆಕ್ಷೇಪಣೆಗಳನ್ನು ಸಲ್ಲಿಸಿದರೂ ಪ್ರಯೋಜನವಾಗಿಲ್ಲ ‌ಎಂದು
ಸಂವಿಧಾನ ರಕ್ಷಿಸಿ, ಪ್ರಜಾಪ್ರಭುತ್ವ ಉಳಿಸಿ ವೇದಿಕೆಯ ಮುಖಂಡ ಬಸವರಾಜ ಭಜಂತ್ರಿ ಆಗ್ರಹಿಸಿದರು.

ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು,
2011 ರ ಜನಗಣತಿ ಅನ್ವಯ ವಾರ್ಡ್ ಗಳನ್ನು ವರ್ಗೀಕರಿಸಿಲ್ಲ. ಇದರಿಂದ ಪರಿಶಿಷ್ಟರು, ಹಿಂದುಳಿದ ವರ್ಗ ಹಾಗೂ ಮಹಿಳೆಯರಿಗೆ ಅನ್ಯಾಯವಾಗಿದೆ.
ಹೀಗಾಗಿ ಮಹಾನಗರ ಪಾಲಿಕೆ ಚುನಾವಣೆಯನ್ನು ಅಸಿಂಧುಗೊಳಿಸಬೇಕು
ವೈಜ್ಞಾನಿಕವಾಗಿ ವಾರ್ಡ್ಗಳನ್ನು ಮರು ವಿಂಗಡನೆ ಮಾಡಿ ಮೀಸಲಾತಿ ಸರಿಪಡಿಸಿ ಚುನಾವಣೆ ನಡೆಸಬೇಕು.
ಈ ಸಂಬಂಧ ಕರ್ನಾಟಕ ಹೈಕೋರ್ಟ್ ಪೀಠದ ಮೊರೆ ಹೋಗಿದ್ದೇವೆ.
ಶೀಘ್ರವೇ ನಮಗೆ ನ್ಯಾಯ ಸಿಗಲಿದೆ ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದರು.

About Santosh Naregal

Check Also

ಡಾ.ರಾಜಕುಮಾರ್ ಅಭಿಮಾನಿಗಳಿಂದ ಸಮಸ್ತ ನಾಡಿನ ಜನತೆಗೆ ದೀಪಾವಳಿ ಹಬ್ಬದ ಶುಭಾಶಯಗಳು

Spread the loveಸಂತೋಷ, ಸಮೃದ್ಧ ಮತ್ತು ಸದಾ ನೆನಪಿನಲ್ಲಿ ಉಳಿಯುವ ದೀಪಾವಳಿ ನಿಮ್ಮದಾಗಲಿ, ದೀಪಾವಳಿಯ ಬೆಳಕಿನಂತೆ ನಿಮ್ಮ ಜೀವನದಲ್ಲೂ ಬೆಳಕು …

Leave a Reply

Your email address will not be published. Required fields are marked *

[the_ad id="389"]