Home / Top News / ಆರ್.ಎಸ್.ಎಸ್ ಬಗ್ಗೆ ಸಿದ್ದರಾಮಯ್ಯ ಅಪಪ್ರಚಾರ ಮಾಡುತ್ತಿದ್ದಾರೆ : ಸಿಎಂ ಬಸವರಾಜ ಬೊಮ್ಮಾಯಿ

ಆರ್.ಎಸ್.ಎಸ್ ಬಗ್ಗೆ ಸಿದ್ದರಾಮಯ್ಯ ಅಪಪ್ರಚಾರ ಮಾಡುತ್ತಿದ್ದಾರೆ : ಸಿಎಂ ಬಸವರಾಜ ಬೊಮ್ಮಾಯಿ

Spread the love

ಹುಬ್ಬಳ್ಳಿ : ಆರ್.ಎಸ್.ಎಸ್ ಕಳೆದ 75 ವರ್ಷದಿಂದ ಜನಸೇವೆ ಮಾಡುತ್ತಿದೆ. ಆದರೆ ಸಿದ್ದರಾಮಯ್ಯ ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಸಿದ್ದರಾಮಯ್ಯ ವಿರುದ್ಧ ಸಿಎಂ ಬಸವರಾಜ ಬೊಮ್ಮಾಯಿ ಸಿಡಿಮಿಡಿಗೊಂಡರು.

ನಗರದಲ್ಲಿಂದು ಆರ್ ಎಸ್ ಎಸ್ ಚಡ್ಡಿ ಸುಡುತ್ತೆವೆ ಎನ್ನುವ ಕೈ ನಾಯಕರ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು, ಆರ್ ಎಸ್ ಎಸ್ ಉತ್ತಮ ದೇಶಭಕ್ತಿ ಕೆಲಸ‌ ಮಾಡಿದೆ. ಜನರು ಸಂಕಷ್ಟದಲ್ಲಿದ್ದಾಗ ಸಹಾಯ ಮಾಡಿದೆ. ಆದರೆ ಕೆಲವು ಜನರು ತಪ್ಪು ದಾರಿಗೆ ಎಳೆಯುತ್ತಿದ್ದಾರೆ. ಸಿದ್ದರಾಮಯ್ಯ ಅಪಪ್ರಚಾರ ಮಾಡ್ತಿದ್ದಾರೆ. ಹೀಗೇ ಮಾಡೇ ಎಲ್ಲಾ ರಾಜ್ಯಗಳಲ್ಲಿ ಕಾಂಗ್ರೆಸ್ ಕಳೆದುಕೊಂಡಿದೆ. ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಕರ್ನಾಟಕವನ್ನು ಕಳೆದುಕೊಳ್ಳಲಿದೆ ಎಂದರು.

ರಾಜ್ಯಸಭೆ ಏಲೆಕ್ಷನ್ ನಲ್ಲಿ ಕ್ರಾಸ್ ವೊಟಿಂಗ್ ವಿಚಾರವಾಗಿ ಮಾತನಾಡಿದ ಅವರು, 10 ನೇ ತಾರೀಖಿನವರೆಗೂ ಕಾದು ನೋಡಿ. ಪಠ್ಯ ವಿಚಾರದಲ್ಲು ರಾಜಕಾರಣ ಮಾಡ್ತಿದ್ದಾರೆ. ಅದಕ್ಕೆಲ್ಲವು ನಮ್ಮ ಶಿಕ್ಷಣ ಸಚಿವರು ಉತ್ತರ ನೀಡಿದ್ದಾರೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದರು.

About Santosh Naregal

Check Also

ಪ್ರಜ್ವಲ್ ಫೆನ್ ಡ್ರೈವ್ ಪ್ರಕರಣ ಸಂತ್ರಸ್ತರಿಗೆ ನ್ಯಾಯ ಸಿಗುವಂತಾಗಬೇಕು : ಮಾಜಿ ಸಿಎಂ ಬೊಮ್ಮಾಯಿ

Spread the loveಹುಬ್ಬಳ್ಳಿ : ಪ್ರಜ್ವಲ್ ರೇವಣ್ಣ ಫೆನ್ ಡ್ರೈವ್ ಪ್ರಕರಣದಲ್ಲಿ ನಿಷ್ಪಕ್ಷಪಾತ ತನಿಖೆ ನಡೆಯಬೇಕು. ಸಂತ್ರಸ್ತರಿಗೆ ನ್ಯಾಯ ಸಿಗುವಂತಾಗಬೇಕು …

Leave a Reply

Your email address will not be published. Required fields are marked *

[the_ad id="389"]