ಫೋಟೋ ಟೋಡೇ ಮತ್ತು ಬೈ ಆಂಡ್ ಸೇಲ್ interaction ಪ್ರೈವೇಟ್ ಲಿಮಿಟೆಡ್ ಅವರ ಅಂತರಾಷ್ಟ್ರೀಯ ಮಟ್ಟದ ಫೋಟೋಗ್ರಫಿ ವೀಡಿಯೋಗ್ರಾಫಿ ಆಲ್ಬಮ್ ಮತ್ತು ಡಿಜಿಟಲ್ ಇಮೇಜಿಂಗ್ ಪ್ರದರ್ಶನ ಇಂದು ನಡೆದ ಈ ಪ್ರದರ್ಶನ ಬೆಂಗಳೂರು ಮಹಾನಗರದ ತ್ರಿಪುರ ವಾಸಿನಿ ಅರಮನೆ ಮೈದಾನದಲ್ಲಿ ಮೂರು ದಿನಗಳ ಕಾಲ ನಡೆಯಲಿರುವ ಈ ಪ್ರದರ್ಶನದಲ್ಲಿ ಫೋಟೋಗ್ರಾಫಿ ಮತ್ತು ವಿಡಿಯೋ ಗ್ರಾಫಿ ಗಣನೀಯ ಸೇವೆ ಸಲ್ಲಿಸಿದ ರಾಜ್ಯದ ವಿವಿಧ ಜಿಲ್ಲೆಗಳ ಮಹನೀಯರುಗಳಿಗೆ “ಕರ್ನಾಟಕ ಛಾಯಾ ರತ್ನ” ಪ್ರಶಸ್ತಿ ನೀಡಿ ಗೌರವಿಸಲಾಯಿತು ಅದರಲ್ಲಿ ಹುಬ್ಬಳ್ಳಿ ಫೋಟೋ ಮತ್ತು ವಿಡಿಯೋಗ್ರಾಫರ್ ಸಂಘದ ಸದಸ್ಯರಾದ ಅನಿಲ್ ತುರಮರಿ ಮತ್ತು ವಿಜಯ ಬಾಕಳೆ ಅವರಿಗೆ ಈ ಸಂದರ್ಭದಲ್ಲಿ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಪ್ರಶಸ್ತಿ ಪಡೆದವರಿಗೆ ಹುಬ್ಬಳ್ಳಿ ಫೋಟೋ ಮತ್ತು ವಿಡಿಯೋ ಗ್ರಾಫರ್ ಸಂಘದ ಅಧ್ಯಕ್ಷ ಕಿರಣ್ ಬಾಕಳೆ ಮತ್ತು ಉಪಾಧ್ಯಕ್ಷ ದಿನೇಶ್ ದಾಬಡೆ ಮತ್ತು ಆಡಳಿತ ಮಂಡಳಿ ಸದಸ್ಯರು ಅಭಿನಂದನೆ ಸಲ್ಲಿಸಿದ್ದಾರೆ.