Home / ಪ್ರಮುಖ ನಗರಗಳು / ಹುಬ್ಬಳ್ಳಿ , ಧಾರವಾಡ / ಆಕಸ್ಮಿಕ ಬೆಂಕಿ ಅವಘಡ ಸಂಭವಿಸಿದೆ

ಆಕಸ್ಮಿಕ ಬೆಂಕಿ ಅವಘಡ ಸಂಭವಿಸಿದೆ

Spread the love

ಕುಂದಗೋಳ
ಕುಂದಗೋಳ ತಾಲೂಕಿನ ಯರುಗುಪ್ಪಿ ಗ್ರಾಮದ ನಾಗಪ್ಪ ದೂಳಪ್ಪ ಸತ್ಯನಾಯ್ಕರ ಎಂಬುವರು ಮನೆಯಲ್ಲಿ ಇಂದು ಆಕಸ್ಮಿಕವಾಗಿ ವಿದ್ಯುತ್ ಅವಘಡದಿಂದ ಬೆಂಕಿ ತಗುಲಿ ಮನೆಯಲ್ಲಿ ಇರುವ ಚಿನ್ನ, ಬೆಳ್ಳಿ, ನಗದು ಹಣ, ಮುಂತಾದ ಸಾಮಗ್ರಿಗಳು ಸುಟ್ಟು ಕರಕಲಾಗಿವೆ.

ಹೌದು! ಗ್ರಾಮದ ನಾಗಪ್ಪ ದೂಳಪ್ಪ ಸತ್ಯನಾಯ್ಕರ ಎಂಬುವರು ಬೆಳಿಗ್ಗೆ ಜಮೀನಿನ ಕೆಲಸಕ್ಕೆ ಹೋದಾಗ ಆಕಸ್ಮಿಕವಾಗಿ ಮನೆಯಲ್ಲಿ ಬೆಂಕಿ ಅವಘಡ ನಡೆದಿದೆ ಎನ್ನಲಾಗಿದೆ. ಈ ಸಂದರ್ಭದಲ್ಲಿ ಮನೆ ಹಾಗೂ ಮನೆಯಲ್ಲಿ ಇರುವ ಚಿನ್ನಾಭರಣಗಳು, ನಗದು ಹಣ ಕೂಡಾ ಬೆಂಕಿಗೆ ಆಹುತಿಯಾಗಿವೆ.

ಈ ಘಟನೆಯಿಂದಾಗಿ ಬಡ ಕುಟುಂಬವು ದುಡಿಮೆ ಮಾಡಿ ಕೂಡಿಟ್ಟ ಹಣವೂ ಇಂದು ಸುಟ್ಟು ಹೋಗಿದೆ ಇದರಿಂದಾಗಿ ಈ ಕುಟುಂಬವು ಸಂಕಷ್ಟಕ್ಕೆ ಸಿಲುಕಿ ರೋಧಿಸುವ ಸನ್ನಿವೇಶ ಕಣ್ಣಿಗೆ ಕಟ್ಟಿದಂತಿದೆ.
ಈ ಘಟನೆ ಕುಂದಗೋಳ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ ಸ್ಥಳಕ್ಕೆ ಗ್ರಾಮ ಲೆಕ್ಕಾಧಿಕಾರಿ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

About Editor 2

Check Also

ಡಾ.ರಾಜಕುಮಾರ್ ಅಭಿಮಾನಿಗಳಿಂದ ಸಮಸ್ತ ನಾಡಿನ ಜನತೆಗೆ ದೀಪಾವಳಿ ಹಬ್ಬದ ಶುಭಾಶಯಗಳು

Spread the loveಸಂತೋಷ, ಸಮೃದ್ಧ ಮತ್ತು ಸದಾ ನೆನಪಿನಲ್ಲಿ ಉಳಿಯುವ ದೀಪಾವಳಿ ನಿಮ್ಮದಾಗಲಿ, ದೀಪಾವಳಿಯ ಬೆಳಕಿನಂತೆ ನಿಮ್ಮ ಜೀವನದಲ್ಲೂ ಬೆಳಕು …

Leave a Reply

Your email address will not be published. Required fields are marked *

[the_ad id="389"]