Home / ಪ್ರಮುಖ ನಗರಗಳು / ಹುಬ್ಬಳ್ಳಿ , ಧಾರವಾಡ / ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಯುವಕನ ಬಂಧನ

ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಯುವಕನ ಬಂಧನ

Spread the love

ಕುಂದಗೋಳ : ತಾಲೂಕಿನ ಚಿಕ್ಕಗುಂಜಳ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಚಿಕ್ಕಗುಂಜಳ ಗ್ರಾಮದ ಬಸನಗೌಡ ಮಂಜುನಾಥಗೌಡ ನೆಗಳೂರ ಎಂಬ ಯುವಕ ಡಾ: ಬಿ ಆರ್ ಅಂಬೇಡ್ಕರ್ ಅವರ ಕುರಿತು ಇರುವ ಪೋಸ್ಟ್ ಗೆ ಅವಹೇಳನಕಾರಿಯಾಗಿ ಕಾಮೆಂಟ್ ಮಾಡಿ ಗ್ರಾಮದಲ್ಲಿ ಸ್ವಲ್ಪ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು. ಯುವಕನ ಮೇಲೆ ಗುಡಗೇರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ.

ಹೌದು! ಸಾಮಾಜಿಕ ಜಾಲತಾಣದ ಇನ್ ಸ್ಟಾಗ್ರಾಂನಲ್ಲಿ. ಡಾ: ಬಿ ಆರ್ ಅಂಬೇಡ್ಕರ್ ಅವರ ಕುರಿತು ಇರುವ ಪೋಸ್ಟ್ ಗೆ ಅವಹೇಳನಕಾರಿಯಾಗಿ ಕಾಮೆಂಟ್ ಮಾಡಿರುವ ಯುವಕನನ್ನು ಕೂಡಲೇ ಬಂಧಿಸಿ ಆತನ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕೆಂದು ಗ್ರಾಮದ ಉಡಚಪ್ಪ ಸಣ್ಣ ನಿಂಗಪ್ಪ ಪರಸಣ್ಣವರ ಅವರು ಗುಡಗೇರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಗುಡಗೇರಿ ಠಾಣೆ ಪಿಎಸ್ಐ ಆದ ನವೀನ್ ಜಕ್ಕಲಿ ಅವರು ಪ್ರಕರಣ ದಾಖಲಿಸಿಕೊಂಡು ಯುವಕನನ್ನು ಬಂಧಿಸಿ ತನಿಖೆ ಕೈಗೊಂಡಿದ್ದಾರೆ.

About Editor 2

Check Also

ಡಾ.ರಾಜಕುಮಾರ್ ಅಭಿಮಾನಿಗಳಿಂದ ಸಮಸ್ತ ನಾಡಿನ ಜನತೆಗೆ ದೀಪಾವಳಿ ಹಬ್ಬದ ಶುಭಾಶಯಗಳು

Spread the loveಸಂತೋಷ, ಸಮೃದ್ಧ ಮತ್ತು ಸದಾ ನೆನಪಿನಲ್ಲಿ ಉಳಿಯುವ ದೀಪಾವಳಿ ನಿಮ್ಮದಾಗಲಿ, ದೀಪಾವಳಿಯ ಬೆಳಕಿನಂತೆ ನಿಮ್ಮ ಜೀವನದಲ್ಲೂ ಬೆಳಕು …

Leave a Reply

Your email address will not be published. Required fields are marked *

[the_ad id="389"]