Home / ಪ್ರಮುಖ ನಗರಗಳು / ಹುಬ್ಬಳ್ಳಿ , ಧಾರವಾಡ / ಕೋವಿಡ್ ಹಿನ್ನಲೆಯಲ್ಲಿ ಹೊರ ಜಿಲ್ಲೆ ಹಾಗೂ ಹೊರ ರಾಜ್ಯದ ಭಕ್ತರಿಗಿಲ್ಲ ಛಬ್ಬಿ ಗಣೇಶನ ದರ್ಶನ

ಕೋವಿಡ್ ಹಿನ್ನಲೆಯಲ್ಲಿ ಹೊರ ಜಿಲ್ಲೆ ಹಾಗೂ ಹೊರ ರಾಜ್ಯದ ಭಕ್ತರಿಗಿಲ್ಲ ಛಬ್ಬಿ ಗಣೇಶನ ದರ್ಶನ

Spread the love

ಹುಬ್ಬಳ್ಳಿ: ಕೋವಿಡ್ 19 ನಿಯಂತ್ರಣ ಹಿನ್ನಲೆಯಲ್ಲಿ ರಾಜ್ಯ ಸರ್ಕಾರ ಮೊಹರಾಂ ಹಾಗೂ ಗಣೇಶ ಹಬ್ಬ ಆಚರಿಸುವ ಸಂಬಂದ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ. ಹುಬ್ಬಳ್ಳಿ ಗ್ರಾಮೀಣ ತಾಲೂಕಿನ ಛಬ್ಬಿ ಗ್ರಾಮದ ಪ್ರಸಿದ್ದ ಗಣೇಶ ಮೂರ್ತಿ ಪ್ರತಿಷ್ಠಾಪನೆ ಹಾಗೂ ಮೊಹರಾಂ ಆಚರಣೆ ಕುರಿತು ಉಪವಿಭಾಗಾಧಿಕಾರಿ ಗೋಪಾಲಕೃಷ್ಣ ಅಧ್ಯಕ್ಷತೆಯಲ್ಲಿ ಛಬ್ಬಿ ಗ್ರಾಮ‌ ಪಂಚಾಯಿತಿ ಸಭಾ ಭವನದಲ್ಲಿ ಪೂರ್ವಭಾವಿ ಸಭೆ ಜರುಗಿತು.

ಸಭೆಯಲ್ಲಿ ಸರ್ಕಾರ ಹೊರಡಿಸಿರುವ ಮಾರ್ಗಸೂಚಿಗಳನ್ನು ಓದಿ ಸಾರ್ವಜನಿಕರಿಗೆ ತಿಳಿಸಲಾಯಿತು. ಸಾರ್ವಜನಿಕರು ಸಾಮಾಜಿಕ ಅಂತರವನ್ನು ಕಡ್ಡಾಯವಾಗಿ ಕಾಪಾಡಿಕೊಳ್ಳಬೇಕು. ಮಖಗವಸು ಕಡ್ಡಾಯವಾಗಿ ಧರಿಸಬೇಕು. ಮೊಹರಾಂ ಪಾರ್ಥನೆಯನ್ನು 60 ವರ್ಷ ಮೇಲ್ಪಟ್ಟವರು ಹಾಗೂ ಮಕ್ಕಳು ಮನೆಯಲ್ಲಿಯೇ ಸಲ್ಲಿಸಬೇಕು. ಮಸಿದೀಗಳಲ್ಲಿ ಜನದಟ್ಟಣೆ ಸೇರಿದಂತೆ ಸರತಿಯ ಆಧಾರದಲ್ಲಿ ಪ್ರಾರ್ಥನೆ ಸಲ್ಲಿಸಬಹುದಾಗಿದೆ. ಯಾವುದೇ ರೀತಿ ಸಾರ್ವಜನಿಕ ಸಭೆ ಸಮಾರಂಭಗಳಿಗೆ ಅವಕಾಶವಿಲ್ಲ.

ಛಬ್ಬಿಯಲ್ಲಿ ಸಾಂಪ್ರದಾಯಕವಾಗಿ ಕುಲಕರ್ಣಿ ಮನೆತನದವರು ಗಣೇಶನ ಮೂರ್ತಿಯನ್ನು ಪ್ರತಿಷ್ಠಾಪಿಸಬಹುದು. ಆದರೆ ಸಾರ್ವಜನಿಕರು ಭಾಗವಹಿಸಲು ಅವಕಾಶವಿಲ್ಲ. ಹೊರ ರಾಜ್ಯ ಜಿಲ್ಲೆಗಳಿಂದ ಆಗಮಿಸುವ ಭಕ್ತರಿಗೆ ಗಣೇಶನ ದರ್ಶನಕ್ಕೆ ಅವಕಾಶವಿಲ್ಲ. ಸಾರ್ವಜನಿಕ ದರ್ಶನ ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಕೋವಿಡ್ ನಿಯಮಾನುಸಾರ ಗಣೇಶೋತ್ಸವ ಆಚರಿಸುವುದಾಗಿ ಕುಲಕರ್ಣಿ ಮನೆತನದವರು ಸಭೆಗೆ ತಿಳಿಸಿದರು.

ತಹಶಿಲ್ದಾರ ಪ್ರಕಾಶ್ ನಾಸಿ, ಗ್ರಾ.ಪಂ. ಅಧ್ಯಕ್ಷೆ ಗೌರವ್ವ ಕುರಬರ್, ಉಪಾಧ್ಯಕ್ಷ ರವಿ ಹುಲ್ಲಂಬಿ, ಕಂದಾಯ ನಿರೀಕ್ಷಕ ದಾನೇಶ್, ಪಿ.ಡಿ.ಓ.ಹರ್ಷ ಸೇರಿದಂತೆ ಪೊಲೀಸ್ ಇಲಾಖೆ ಅಧಿಕಾರಿಗಳು ಸಾರ್ವಜನಿಕರು ಸಭೆಯಲ್ಲಿ ಭಾಗವಹಿಸಿದ್ದರು.

About Santosh Naregal

Check Also

ಪ್ರಜ್ವಲ್ ಫೆನ್ ಡ್ರೈವ್ ಪ್ರಕರಣ ಸಂತ್ರಸ್ತರಿಗೆ ನ್ಯಾಯ ಸಿಗುವಂತಾಗಬೇಕು : ಮಾಜಿ ಸಿಎಂ ಬೊಮ್ಮಾಯಿ

Spread the loveಹುಬ್ಬಳ್ಳಿ : ಪ್ರಜ್ವಲ್ ರೇವಣ್ಣ ಫೆನ್ ಡ್ರೈವ್ ಪ್ರಕರಣದಲ್ಲಿ ನಿಷ್ಪಕ್ಷಪಾತ ತನಿಖೆ ನಡೆಯಬೇಕು. ಸಂತ್ರಸ್ತರಿಗೆ ನ್ಯಾಯ ಸಿಗುವಂತಾಗಬೇಕು …

Leave a Reply

Your email address will not be published. Required fields are marked *

[the_ad id="389"]