Home / ಪ್ರಮುಖ ನಗರಗಳು / ಹುಬ್ಬಳ್ಳಿ , ಧಾರವಾಡ / ಹಿಂದುಳಿದ ವರ್ಗಗಳ ಚಾಂಪಿಯನ್ ಆಗಲು ಹಸಿ ಸುಳ್ಳು ಹೇಳುವದನ್ನು ಸಿದ್ದರಾಮಯ್ಯ ನಿಲ್ಲಿಸಲಿ- ಜಗದೀಶ್ ಶೆಟ್ಟರ್

ಹಿಂದುಳಿದ ವರ್ಗಗಳ ಚಾಂಪಿಯನ್ ಆಗಲು ಹಸಿ ಸುಳ್ಳು ಹೇಳುವದನ್ನು ಸಿದ್ದರಾಮಯ್ಯ ನಿಲ್ಲಿಸಲಿ- ಜಗದೀಶ್ ಶೆಟ್ಟರ್

Spread the love

ಹುಬ್ಬಳ್ಳಿ : ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ನಡೆಸಿದ ಜಾತಿಗಣತಿ ವರದಿಯು 15-05-2015 ರಲ್ಲಿಯೇ ಸಿದ್ದವಾಗಿದೆ. ಇದನ್ನು ಸಿದ್ದರಾಮಯ್ಯ ಯಾಕೆ ಬಿಡುಗಡೆ ಮಾಡಲಿಲ್ಲ. ಇದನ್ನು ಇವಾಗ ಬಿಡುಗಡೆ ಮಾಡಬೇಕೆಂದು ಹೇಳುತ್ತಿರುವುದು ಯಾಕೆ ಎಂದು ಶಾಸಜ ಜಗದೀಶ್ ಶೆಟ್ಟರ್ ನೇರವಾಗಿ ಪ್ರಶ್ನೆ ಮಾಡಿದ್ದಾರೆ.

ನಗರದಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅವರದೇ ಪಕ್ಷದ ನಾಯಕ ಮುಖಂಡ ಮುಖ್ಯಮಂತ್ರಿ ಚಂದ್ರು ಅವರು, ವರದಿ ಬಿಡುಗಡೆ ಮಾಡುವಂತೆ ಕೋರಿ ಹೈಕೋರ್ಟ್ ಗೆ ಸಲ್ಲಿಸಿದ ರಿಟ್ ಪಿಟಿಶನ್ ದಲ್ಲಿ ವರದಿ ಸಿದ್ದವಾಗಿರುವ ದಿನಾಂಕವನ್ನು ಉಲ್ಲೇಖಿಸಿದ್ದಾರೆ. ಅಂದರೆ ಸಿದ್ದರಾಮಯ್ಯ ಅವರು ಸಿಎಂ ಇದ್ದ ಅವಧಿಯಲ್ಲಿ ವರದಿ ಸಿದ್ದಗೊಂಡಿದೆ ಎಂಬುದು ಸ್ಪಷ್ಟವಾಗಿದ್ದು ಅವರು ಯಾಕೆ ಬಿಡುಗಡೆ ಮಾಡಲಿಲ್ಲ ಎಂದು ಪ್ರಶ್ನೆ ಮಾಡಿದರು.

ಅದನ್ನು ಬೇರೆಯವರ ತಲೆಗೆ ಕಟ್ಟಲು ಸಮ್ಮಿಶ್ರ ಸರ್ಕಾರ ಅಧಿಕಾರದಲ್ಲಿದ್ದಾಗ ಕುಮಾರಸ್ವಾಮಿ ಅವರು ವರದಿ ಬಿಡುಗಡೆ ಮಾಡಲಿಲ್ಲ ಎಂದು ಆರೋಪಿಸುವ ಸಿದ್ದರಾಮಯ್ಯ ಅವರು ಕಾಂಗ್ರೆಸ್ ಸರ್ಕಾರವೇ ಸಪೋರ್ಟ್ ಮಾಡಿದ್ದ ಕಾಂಗ್ರೆಸ್ ಯಾಕೆ ಸುಮ್ಮನೆ ಕುಳಿತ್ತಿತ್ತು. ಸದ್ಯ ಇದೀಗ ಯಾಕೆ ಪ್ರಸ್ತಾಪ ಮಾಡುತ್ತಿರುವುದು. ಒಬ್ಬರ ಮೇಲೆ ಒಬ್ಬರು ಗೂಬೆ ಕುಡಿಸುತ್ತಿರುವುದು ಯಾಕೆ ಎಂದು ಆಕ್ಷೇಪಿಸಿದರು.

ಜಾತಿಗಣತಿ ವರದಿ ಸಿದ್ದರಾಗಿರುವುದು ಅವರಿಗೆ ಗೊತ್ತಿದ್ದು, ಇನ್ನೂ ತಯಾರಾಗಿಲ್ಲ ಎಂದು ಹಸಿ ಸುಳ್ಳು ಹೇಳುತ್ತಾ ಬಂದರು. ಸುಳ್ಳು ಹೇಳುವುದರಲ್ಲಿ ಸಿದ್ದರಾಮಯ್ಯ ನಿಸ್ಸಿಂರಾಗಿದ್ದಾರೆ ಎಂದು ಶೆಟ್ಟರ್ ಟೀಕಿಸಿದರು.

ಹಿಂದುಳಿದ ವರ್ಗದ ಚಾಂಪಿಯನ್ ಆಗಲು ಹೊರಟಿರುವ ಸಿದ್ದರಾಮಯ್ಯ ಹಿಂದುಳಿದ ವರ್ಗಗಳ ಜನರ ಬಗ್ಗೆ ಮೊಸಳೆ ಕಣ್ಣೀರು ಸುರಿಸುತ್ತಿದ್ದಾರೆ. ಅವರದ್ದು ಬೇಜವಾವ್ದಾರಿಯ ಪರಮಾವಧಿ ಎಂದು ಟೀಕಿಸಿದರು.

ಅವರ ಅಧಿಕಾರ ಅವಧಿಯಲ್ಲಿಯೇ ಸಿದ್ದಗೊಂಡ ವರದಿಯನ್ನು ಬಿಡುಗಡೆ ಮಾಡಲು ಹೊರಟ್ಟಿದ್ದ ಸಿದ್ದರಾಮಯ್ಯ ಅವರಿಗೆ ಕಾಂಗ್ರೆಸ್ ದಲ್ಲಿಯೇ ತೀವ್ರ ವಿರೋಧವಾಗಿದ್ದರಿಂದ ಅದನ್ನು ಅಷ್ಟಕ್ಕೆ ಮುಚ್ಚಿಡಲಾಯಿತು ಎಂದು ಶೆಟ್ಟರ್ ತಿಳಿಸಿದರು.

About Santosh Naregal

Check Also

ಪ್ರಜ್ವಲ್ ಫೆನ್ ಡ್ರೈವ್ ಪ್ರಕರಣ ಸಂತ್ರಸ್ತರಿಗೆ ನ್ಯಾಯ ಸಿಗುವಂತಾಗಬೇಕು : ಮಾಜಿ ಸಿಎಂ ಬೊಮ್ಮಾಯಿ

Spread the loveಹುಬ್ಬಳ್ಳಿ : ಪ್ರಜ್ವಲ್ ರೇವಣ್ಣ ಫೆನ್ ಡ್ರೈವ್ ಪ್ರಕರಣದಲ್ಲಿ ನಿಷ್ಪಕ್ಷಪಾತ ತನಿಖೆ ನಡೆಯಬೇಕು. ಸಂತ್ರಸ್ತರಿಗೆ ನ್ಯಾಯ ಸಿಗುವಂತಾಗಬೇಕು …

Leave a Reply

Your email address will not be published. Required fields are marked *

[the_ad id="389"]