Home / Top News / ಕಸಬಾಪೇಟೆ ಪೊಲೀಸ್ ಠಾಣೆ ಪಿಐ ಅಡೆಪ್ಪ ಬನ್ನಿ ಎತ್ತಂಗಡ

ಕಸಬಾಪೇಟೆ ಪೊಲೀಸ್ ಠಾಣೆ ಪಿಐ ಅಡೆಪ್ಪ ಬನ್ನಿ ಎತ್ತಂಗಡ

Spread the love

ಹುಬ್ಬಳ್ಳಿ : ಹಳೇ ಹುಬ್ಬಳ್ಳಿಯ ಜಂಗ್ಲೀಪೇಟೆ ನಿವಾಸಿ ಸಂತೋಷ ಮುರುಗೋಡ ಹತ್ಯೆ ಪ್ರಕರಣ ಹಿನ್ನೆಲೆಯಲ್ಲಿ ಪೊಲೀಸರ ಕೈವಾಡ ಇದೆ ಎಂದು ಆರೋಪಿಸಿ ಕಸಬಾಪೇಟೆ ಪೊಲೀಸ್ ಠಾಣೆ ಮುಂದೆ ಭಾನುವಾರ ಶವ ಇಟ್ಟು ಪ್ರತಿಭಟನೆ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಕಸಬಾಪೇಟೆ ಪೊಲೀಸ್ ಠಾಣೆ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಅಡೆಪ್ಪ ಬನ್ನಿ ಅವರನ್ನು ಹುಬ್ಬಳ್ಳಿ ಧಾರವಾಡ ಸಿಸಿಬಿಗೆ ವರ್ಗಾವಣೆ ಮಾಡಲಾಗಿತ್ತು.‌ ಸಿಸಿಬಿ ಪೊಲೀಸ್ ಇನ್ಸ್‌ಪೆಕ್ಟರ್ ಆರ್ ಎಚ್ ಹಳ್ಳೂರು ಅವರನ್ನು ಕಸಬಾಪೇಟೆ ಪೊಲೀಸ್ ಠಾಣೆಗೆ ವರ್ಗಾವಣೆ ಮಾಡಲಾಗಿದೆ. ಸಂತೋಷ ಮುರುಗೋಡನನ್ನ ಆತನ ಸ್ನೇಹಿತ ಶಿವಾನಂದ ನಾಯಕ ಶುಕ್ರವಾರ ರಾತ್ರಿ ಹಳೆ ಹುಬ್ಬಳ್ಳಿಯಲ್ಲಿ ಚಾಕು ಇರಿದು ಕೊಲೆ ಮಾಡಿದ್ದನು. ಸಂತೋಷ ಮುರುಗೋಡ ಕೊಲೆ ಹಿನ್ನೆಲೆಯಲ್ಲಿ ನ್ಯಾಯಕ್ಕಾಗಿ ಆಗ್ರಹಿಸಿ ಪೊಲೀಸ್ ಠಾಣೆ ಮುಂದೆ ಜಂಗ್ಲೀಪೇಟೆ ನಿವಾಸಿಗಳು ಹಾಗೂ ಸಂತೋಷ ಕುಟುಂಬಸ್ಥರು ಭಾನುವಾರ ಪ್ರತಿಭಟನೆ ಮೃತದೇಹ ಕಸಬಾ ಪೊಲೀಸ್ ಠಾಣೆಗೆ ತಂದು ಆಕ್ರೋಶ ವ್ಯಕ್ತಪಡಿಸಿದ್ದರು.‌ ಶಿವಾನಂದ ನಾಯ್ಕಗೆ ಪೊಲೀಸರ ಬೆಂಬಲ ಇದೆ ಅಂತಾ ಸಹ ಆರೋಪಿಸಲಾಗಿತ್ತು.

About Santosh Naregal

Check Also

ಧೀಮಂತ ಪ್ರಶಸ್ತಿಗೆ ಭಾಜನರಾದ ಪತ್ರಕರ್ತ ಪ್ರಶಾಂತ ಎಂ ದಿನ್ನಿ

Spread the loveಪತ್ರಕರ್ತ ಪ್ರಶಾಂತ್ ಎಂ ದಿನ್ನಿ ಅವರು ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ವತಿಯಿಂದ ನೀಡುವ ಧೀಮಂತ ಪ್ರಶಸ್ತಿಗೆ …

Leave a Reply

Your email address will not be published. Required fields are marked *

[the_ad id="389"]