ಹುಬ್ಬಳ್ಳಿಯ ನೃಪತುಂಗ ಬೆಟ್ಟದ ಸುತ್ತಲಿನ ಪ್ರದೇಶದಲ್ಲಿ ಕಳೆದ ಎರಡುಮೂರು ದಿನಗಳಿಂದ ಚಿರತೆ ಪತ್ತೆ ಮತ್ತು ಅದನ್ನು ಸೆರೆ ಹಿಡಿಯುವ ಕಾರ್ಯಾಚರಣೆ ನಡೆದಿದ್ದು, ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಹಾಗೂ ಶಾಲಾ ಶಿಕ್ಷಕರ ಪ್ರಾಣ ಪ್ರಾಣ ಹಾನಿಯಾಗದಂತೆ ಮುನ್ನಚ್ಚರಿಕೆ ಕ್ರಮವಾಗಿ ಶಾಲೆಯಲ್ಲಿ ಬೌತಿಕ ಕ್ಲಸ್ಕ್ಕೆ ನಿರ್ಬಂಧ ಹೇರಿ ಆನ್ ಲೈನ್ ಕ್ಲಾಸ್ ನಡೆಸುವಂತೆ ಕೇಂದ್ರಿಯ ವಿದ್ಯಾಲಯದ ಅಧ್ಯಕ್ಷರಾಗಿರುವ ಧಾರವಾಡ ಜಿಲ್ಲಾಧಿಕಾರಿ ನಿತೇಶ ಪಾಟೀಲ್ ಆದೇಶ ಹೊರಡಿಸಿದ್ದಾರೆ.
ರಾಜನಗರದ ಕೇಂದ್ರೀಯ ವಿದ್ಯಾಲಯದಲ್ಲಿ 1ರಿಂದ 12 ನೇ ತರಗತಿವರೆಗೆ ಕ್ಲಾಸ್ ಈ ಹಿಂದೆ ನಡೆಯುತ್ತಿದ್ದವು, ಆದರೆ ಈ ಪ್ರದೇಶದಲ್ಲಿ ಚಿರತೆ ಪತ್ತೆ ಮತ್ತು ಅದನ್ನು ಸೆರೆ ಹಿಡಿಯುವ ಕಾರ್ಯಾಚರಣೆ ನಡೆಯುತ್ತಿರುವದರಿಂದ ಹಾಗೂ ವಿದ್ಯಾರ್ಥಿಗಳ, ಇತರರ ಸುರಕ್ಷತೆ ದೃಷ್ಟಿಯಿಂದ ಭೌತಿಕವಾಗಿ ನಡೆಯುತ್ತಿದ್ದ ಎಲ್ಲ ವರ್ಗಗಳನ್ನು ರದ್ದುಗೊಳಿಸಲಾಗಿದೆ. ಮತ್ತು ಎಲ್ಲ ಶಿಕ್ಷಕರು ಆನ್ ಲೈನ್ ಮೂಲಕ ಇಂದಿನಿಂದ ಕ್ಲಾಸ್ ತೆಗೆದುಕೊಳ್ಳಲು ಸೂಚಿಸಲಾಗಿದೆ.
ಈ ಮಾಹಿತಿಯನ್ನು ರಾಜನಗರ ಕೇಂದ್ರೀಯ ವಿದ್ಯಾಲಯದ ಮುಖ್ಯಸ್ಥರ ಮೂಲಕ ಎಲ್ಲ ವಿದ್ಯಾರ್ಥಿಗಳಿಗೆ ಮತ್ತು ಪಾಲಕರಿಗೆ ಈಗಾಗಲೇ ನೀಡಲಾಗಿದ್ದು, ಚಿರತೆ ಕಾರ್ಯಾಚರಣೆ ಮುಗಿಯುವವರೆಗೆ ರಾಜನಗರ ಕೇಂದ್ರೀಯ ವಿದ್ಯಾಲಯದ ಕ್ಲಾಸ್ ಗಳನ್ನು ಆನ್ ಲೈನ್ ದಲ್ಲಿ ಮಾತ್ರ ನಡೆಸಲಾಗುತ್ತದೆ ಎಂದು ಜಿಲ್ಲಾಧಿಕಾರಿಗಳು ಮಾಹಿತಿ ನೀಡಿದ್ದಾರೆ.