Home / Top News / ಚೆಂಬೆಳಕಿನ ಕವಿ ಡಾ. ಚನ್ನವೀರ ಕಣವಿ ನಿಧನ; ಮಧ್ಯಾಹ್ನದಿಂದ ಕೆಸಿಡಿ ಆವರಣದಲ್ಲಿ ಸಾರ್ವಜನಿಕ ದರ್ಶನಕ್ಕೆ ಜಿಲ್ಲಾಡಳಿತ ಸಿದ್ದತೆ

ಚೆಂಬೆಳಕಿನ ಕವಿ ಡಾ. ಚನ್ನವೀರ ಕಣವಿ ನಿಧನ; ಮಧ್ಯಾಹ್ನದಿಂದ ಕೆಸಿಡಿ ಆವರಣದಲ್ಲಿ ಸಾರ್ವಜನಿಕ ದರ್ಶನಕ್ಕೆ ಜಿಲ್ಲಾಡಳಿತ ಸಿದ್ದತೆ

Spread the love

ಚೆಂಬೆಳಕಿನ ಕವಿ, ನಾಡೋಜ ಡಾ.ಚೆನ್ನವೀರ ಕಣವಿ ಅವರು ಇಂದು ಬೆಳಿಗ್ಗೆ ನಿಧನರಾಗಿದ್ದಾರೆ. ಇಂದು ಮಧ್ಯಾಹ್ನದಿಂದ ಡಾ.ಚೆನ್ನವೀರ ಕಣವಿ ಅವರ ಪಾರ್ಥಿವ ಶರೀರವನ್ನು ಸಾರ್ವಜನಿಕ ದರ್ಶನಕ್ಕಾಗಿ ಕೆಸಿಡಿ ಆವರಣದಲ್ಲಿ ಇರಿಸಲಾಗುವುದು ಎಂದು ಜಿಲ್ಲಾಧಿಕಾರಿ ನಿತೇಶ ಪಾಟೀಲ

ಈ ಕುರಿತು ಪ್ರಕಟಣೆ ನೀಡಿರುವ ಅವರು, ಕಳೆದ ಜನವರಿ 15 ರಿಂದ ಎಸ್‌ಡಿಎಂ ಆಸ್ಪತ್ರೆಗೆ ದಾಖಲಾಗಿ ಡಾ.ಕಣವಿ ಅವರು ಚಿಕಿತ್ಸೆ ಪಡೆಯುತ್ತಿದ್ದರು. ಆರಂಭದಲ್ಲಿ ಕೋವಿಡ್ ಸೋಂಕು ತಗುಲಿದ್ದರಿಂದ ಚಿಕಿತ್ಸೆ ನೀಡಿ, ಗುಣಮುಖಗೊಳಿಸಲಾಗಿತ್ತು. ನಂತರ ಅವರು ವಯೊಸಹಜ ಖಾಯಿಲೆಯಿಂದ ಬಳಲುತ್ತಿದ್ದರು. ಜಿಲ್ಲಾಡಳಿತದಿಂದ ಅಗತ್ಯ ಚಿಕಿತ್ಸೆಗೆ ಕ್ರಮವಹಿಸಲಾಗಿತ್ತು. ಮಾನ್ಯ ಮುಖ್ಯಂತ್ರಿಗಳು ಸ್ವತಃ ಭೇಟಿ ನೀಡಿ, ಆರೋಗ್ಯ ವಿಚಾರಿಸಿದ್ದರು.

ಚಿಕಿತ್ಸೆ ಫಲಿಸದೆ ಡಾ.ಕಣವಿ ಅವರು ಇಂದು ಬೆಳಿಗ್ಗೆ ನಿಧನರಾದರು.

*ಕೆಸಿಡಿಯಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ:*
ಕವಿ ಡಾ.ಚೆನ್ನವೀರ ಕಣವಿ ಪಾರ್ಥಿವ ಶರೀರದ ಸಾರ್ವಜನಿಕ ದರ್ಶನಕ್ಕೆ ಕೆಸಿಡಿ ಆವರಣದಲ್ಲಿ ಜಿಲ್ಲಾಡಳಿತದಿಂದ ಸಿದ್ದತೆ ಮಾಡಲಾಗಿದೆ.

*ಅಂತ್ಯಕ್ರಿಯೆ:*
ನಾಡೋಜ ಡಾ.ಚನ್ನವೀರ ಕಣವಿ ಅವರ ಅಂತ್ಯಕ್ರಿಯೆ ಇಂದು ಸಂಜೆ ಕೆಲಗೇರಿ ಸಮೀಪದಲ್ಲಿರುವ ಅವರ ಫಾರ್ಮ್ ಹೌಸದಲ್ಲಿ ಜರುಗಿಸಲು ಅವರ ಕುಟುಂಬ ಸದಸ್ಯರು ನಿರ್ಧರಿಸಿದ್ದಾರೆ ಎಂದು ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

About Santosh Naregal

Check Also

ಪ್ರಜ್ವಲ್ ಫೆನ್ ಡ್ರೈವ್ ಪ್ರಕರಣ ಸಂತ್ರಸ್ತರಿಗೆ ನ್ಯಾಯ ಸಿಗುವಂತಾಗಬೇಕು : ಮಾಜಿ ಸಿಎಂ ಬೊಮ್ಮಾಯಿ

Spread the loveಹುಬ್ಬಳ್ಳಿ : ಪ್ರಜ್ವಲ್ ರೇವಣ್ಣ ಫೆನ್ ಡ್ರೈವ್ ಪ್ರಕರಣದಲ್ಲಿ ನಿಷ್ಪಕ್ಷಪಾತ ತನಿಖೆ ನಡೆಯಬೇಕು. ಸಂತ್ರಸ್ತರಿಗೆ ನ್ಯಾಯ ಸಿಗುವಂತಾಗಬೇಕು …

Leave a Reply

Your email address will not be published. Required fields are marked *

[the_ad id="389"]