Home / ಪ್ರಮುಖ ನಗರಗಳು / ಹುಬ್ಬಳ್ಳಿ , ಧಾರವಾಡ / ಚಿರತೆ ಸೆರೆ ಕಾರ್ಯಾಚರಣೆ ಕುರಿತು ಸಭೆ

ಚಿರತೆ ಸೆರೆ ಕಾರ್ಯಾಚರಣೆ ಕುರಿತು ಸಭೆ

Spread the love

ಹುಬ್ಬಳ್ಳಿ : ಹುಬ್ಬಳ್ಳಿ ನೃಪತುಂಗ ಬೆಟ್ಟದ ತಪ್ಪಲು ಹಾಗೂ ಧಾರವಾಡದ ಕೌವಲಗೇರಿಯಲ್ಲಿನ ಚಿರತೆ ಸೆರೆ ಹಿಡಿಯುವ ಕಾರ್ಯಾಚರಣೆ ಕುರಿತು, ಇಂದು ರಾಜನಗರದ ಕೇಂದ್ರೀಯ ವಿದ್ಯಾಲಯದಲ್ಲಿ ಕೈಮಗ್ಗ, ಜವಳಿ, ಕಬ್ಬು ಅಭಿವೃದ್ಧಿ, ಸಕ್ಕರೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಶಂಕರ ಬ. ಪಾಟೀಲ ಮುನೇನಕೊಪ್ಪ ನೇತೃತ್ವದಲ್ಲಿ ಸಭೆ ಜರುಗಿತು. ಕೇಂದ್ರ ಸಂಸದೀಯ ವ್ಯವಹಾರ, ಗಣಿ ಮತ್ತು ಕಲ್ಲಿದ್ದಲು ಸಚಿವ ಪ್ರಹ್ಲಾದ ಜೋಶಿ, ಮಾಜಿ ಮುಖ್ಯಮಂತ್ರಿ ಹಾಗೂ ಶಾಸಕ ಜಗದೀಶ್ ಶೆಟ್ಟರ್, ಶಾಸಕ ಅರವಿಂದ ಬೆಲ್ಲದ್ ಸಭೆಯಲ್ಲಿ ಭಾಗವಹಿಸಿದ್ದರು.

ಗದಗ, ಹಾವೇರಿ,ಕಾರವಾರ ಹಾಗೂ ಕಾಳಿ ಹುಲಿ ರಕ್ಷಿತಾರಣ್ಯದಿಂದ ಹೆಚ್ಚಿನ ಸಿಬ್ಬಂದಿ ಬಂದು ಕಾರ್ಯಾಚರಣೆ ನಡೆಸುತ್ತಿದ್ದಾರೆ. ಕೇಂದ್ರೀಯ ವಿದ್ಯಾಲಯದ ಹಳೆಯ ಶಾಲಾ ಕಟ್ಟಡವನ್ನು ಕಾರ್ಯಾಚರಣೆ ನಿಮಿತ್ತ ತೆರವುಗೊಳಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ಮಾಹಿತಿ ನೀಡಿದರು.

ನೃಪತುಂಗ ಬೆಟ್ಟ ಹಾಗೂ ಕೆವಲಗೌರಿಯಲ್ಲಿ ಚಿರತೆ ಕಂಡುಬಂದಿರುವುದು ಧೃಡವಾಗಿದೆ. ಎರೆಡು ಸ್ಥಗಳಲ್ಲಿ ದೊರೆತಿರುವ ಚಿರತೆ ಸ್ಟೂಲ್ ಸಂಗ್ರಹಿಸಿ ಹೈದರಾಬಾದ್‌ಗೆ ಪರೀಕ್ಷೆಗೆ ಕಳುಹಿಸಿಕೊಡಲಾಗಿದೆ. ಪರೀಕ್ಷೆಯ ವರದಿ ನಂತರ ಎರೆಡು ಸ್ಥಳಗಳಲ್ಲಿ ಕಂಡುಬಂದಿರುವ ಚಿರತೆ ಒಂದೇ ಅಥವಾ ಬೇರೆ ಬೇರೆ ಎಂಬುದು ತಿಳಿದು ಬರಲಿದೆ ಎಂದು ಉಪ ಅರಣ್ಯ ಸಂರಕ್ಷಣಾಧಿಕಾರಿ ಯಶ್‌ಪಾಲ್ ಕ್ಷೀರಸಾಗರ ಸಭೆಯಲ್ಲಿ ತಿಳಿಸಿದರು.

ಪಾಲಿಕೆ ಆಯುಕ್ತ ಡಾ.ಸುರೇಶ್ ಇಟ್ನಾಳ್, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಸೌರಭ್ ಕುಮಾರ್, ಪಾಲಿಕೆ ಸದಸ್ಯರಾದ ವೀರಣ್ಣ ಸವಡಿ, ಸಂತೋಷ್ ಚವ್ಹಾಣ್,
ಕೇಂದ್ರೀಯ ವಿದ್ಯಾಲಯದ ಪ್ರಾಂಶುಪಾಲ ರವಿ ರಾಜೇಶ್ ಸೇರಿದಂತೆ ಮತ್ತಿತರು ಸಭೆಯಲ್ಲಿ ಉಪಸ್ಥಿತರಿದ್ದರು.

About Santosh Naregal

Check Also

ಪ್ರಜ್ವಲ್ ಫೆನ್ ಡ್ರೈವ್ ಪ್ರಕರಣ ಸಂತ್ರಸ್ತರಿಗೆ ನ್ಯಾಯ ಸಿಗುವಂತಾಗಬೇಕು : ಮಾಜಿ ಸಿಎಂ ಬೊಮ್ಮಾಯಿ

Spread the loveಹುಬ್ಬಳ್ಳಿ : ಪ್ರಜ್ವಲ್ ರೇವಣ್ಣ ಫೆನ್ ಡ್ರೈವ್ ಪ್ರಕರಣದಲ್ಲಿ ನಿಷ್ಪಕ್ಷಪಾತ ತನಿಖೆ ನಡೆಯಬೇಕು. ಸಂತ್ರಸ್ತರಿಗೆ ನ್ಯಾಯ ಸಿಗುವಂತಾಗಬೇಕು …

Leave a Reply

Your email address will not be published. Required fields are marked *

[the_ad id="389"]