Home / Top News / ಪ್ರೇಮ ಪ್ರಕರಣ : ಮಾಜಿ ಪ್ರೇಮಿಯಿಂದ ಯುವಕನ ಹತ್ಯೆ

ಪ್ರೇಮ ಪ್ರಕರಣ : ಮಾಜಿ ಪ್ರೇಮಿಯಿಂದ ಯುವಕನ ಹತ್ಯೆ

Spread the love

ಹುಬ್ಬಳ್ಳಿ: ತ್ರಿಕೋನ್ ಪ್ರೇಮ ಕಹಾನಿಯೊಂದು ಒಂದು ಕೊಲೆಯಲ್ಲಿ ಅಂತ್ಯವಾದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.‌

ಹೌದು, ಹುಬ್ಬಳ್ಳಿಯ ನವನಗರ ಠಾಣೆ ವ್ಯಾಪ್ತಿಯ ಸುತ್ತಗಟ್ಟಿಯ ಹೊರವಲಯದಲ್ಲಿ ಯುವಕನ ಹತ್ಯೆ ಆಗಿದ್ದು ,ಹಳೆ ಹುಬ್ಬಳ್ಳಿಯ ನೇಕಾರ ನಗರ  ಮೂಲದ ವಿನಯ್ ಹತ್ಯೆಯಾದ ಯುವಕನಾಗಿದ್ದಾನೆ. ಕಳೆದ ದಿನ ಯುವತಿಯ ಮಾಜಿ ಪ್ರೇಮಿ ಹುಬ್ಬಳ್ಳಿ ನವನಗರದ ರಾಘವೇಂದ್ರ 20 ವರ್ಷದ ವಿನಯ್ ನನ್ನು ಮಾತುಕತೆ ನೆಪದಲ್ಲಿ ಕರೆಸಿ , ನಿರ್ಜನ ಪ್ರದೇಶದಲ್ಲಿ ಹತ್ಯೆ ಮಾಡಿ ಪರಾರಿಯಾಗಿದ್ದನು.

ಇನ್ನು ವಿನಯ್ ಕಾಣೆ ಆಗುತ್ತಿದ್ದಂತೆ ಪೋಷಕರು ಪೊಲೀಸರ ಮೊರೆ ಹೋದಾಗ ಕೊಲೆ ನಡೆದಿರುವುದು ಬೆಳಕಿಗೆ ಬಂದಿದೆ. ಕೊಲೆಯಾದ 24 ಗಂಟೆಯಲ್ಲಿ ಕೊಲೆ ಆರೋಪಿಯನ್ನ ತಕ್ಷಣ ಬಂಧಿಸಿರುವ ನವನಗರ ಠಾಣೆ ಪೊಲೀಸರು ಆರೋಪಿ ರಾಘವೇಂದ್ರನನ್ನು ಬಂಧಿಸಿ
ವಿಚಾರಣೆ ನಡೆಸುತ್ತಿದ್ದಾರೆ. ವಿನಯನ ಮೃತದೇಹವನ್ನು ಕಿಮ್ಸ್ ಶವಾಗಾರಕ್ಕೆ ರವಾನಿಸಲಾಗಿದ್ದು, ಮುಂದಿನ ಕ್ರಮ ಕೈಗೊಳ್ಳಲಾಗುತ್ತಿದೆ.

About Santosh Naregal

Check Also

ಪ್ರಜ್ವಲ್ ಫೆನ್ ಡ್ರೈವ್ ಪ್ರಕರಣ ಸಂತ್ರಸ್ತರಿಗೆ ನ್ಯಾಯ ಸಿಗುವಂತಾಗಬೇಕು : ಮಾಜಿ ಸಿಎಂ ಬೊಮ್ಮಾಯಿ

Spread the loveಹುಬ್ಬಳ್ಳಿ : ಪ್ರಜ್ವಲ್ ರೇವಣ್ಣ ಫೆನ್ ಡ್ರೈವ್ ಪ್ರಕರಣದಲ್ಲಿ ನಿಷ್ಪಕ್ಷಪಾತ ತನಿಖೆ ನಡೆಯಬೇಕು. ಸಂತ್ರಸ್ತರಿಗೆ ನ್ಯಾಯ ಸಿಗುವಂತಾಗಬೇಕು …

Leave a Reply

Your email address will not be published. Required fields are marked *

[the_ad id="389"]