ಹುಬ್ಬಳ್ಳಿ : ರಾಜ್ಯದಲ್ಲಿ ಕೊರೋನಾ ಸೋಂಕು ಹೆಚ್ಚಾಗುತ್ತಿರುವ ಕಾರಣ ಹು-ಧಾ ಮಹಾನಗರ ಪಾಲಿಕೆ ಚುನಾವಣೆಯನ್ನು ಮುಂದೂಡಬೇಕೆಂದು ಸಮಾಜ ಪರಿವರ್ತನಾ ಸಮುದಾಯದ ಸಂಸ್ಥಾಪಕ ಅಧ್ಯಕ್ಷ ಎಸ್.ಆರ್.ಹಿರೇಮಠ ಒತ್ತಾಯಿಸಿದ್ದಾರೆ.
ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೊರೋನಾ ಸೋಂಕು ಹಿನ್ನೆಲೆಯಲ್ಲಿ ಜನರು ಈಗಾಗಲೇ ಸಾಕಷ್ಟು ಸಾವು-ನೋವು ಖಂಡಿದ್ದೇವೆ. ಈ ಮೊದಲು ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಮಾಸ್ಕ್ ಹಾಕದೆ ಸಾಮಾಜಿಕ ಅಂತರ ಕಾಪಾಡದೆ , ರ್ಯಾಲಿ , ಮಾಡಿ ಚುನಾವಣೆ ನಡೆಸಿದ್ದರಿಂದ ಅಲ್ಲಿ ಕರೊನಾ ಹತೋಟಿ ಕೈ ತಪ್ಪಿತ್ತು ಇದು ಎರಡನೇ ಅಲೆಗೆ ಕಾರಣವಾಗಿತ್ತು. ಈಗ ಸ್ಥಳೀಯ ಸಂಸ್ಥೆಯ ಚುನಾವಣೆ ಘೋಷಣೆಯಾಗಿದೆ.
ಇದೀಗ ಮತ್ತೆ ಸರ್ಕಾರ ಜವಾಬ್ದಾರಿ ಮರೆತು ಚುನಾವಣೆ ನಡೆಸಬಾರದು ಈ ಕೂಡಲೇ ಸರ್ಕಾರ ಪಾಲಿಕೆ ಚುನಾವಣೆ ಮುಂದೂಡಲು ಕ್ರಮ ತೆಗೆದುಕೊಳ್ಳಬೇಕೆಂದರು ಎಂದರು.