Home / ಪ್ರಮುಖ ನಗರಗಳು / ಹುಬ್ಬಳ್ಳಿ , ಧಾರವಾಡ / IAS ಕನಸಿನೊಂದಿಗೆ ಧಾರವಾಡಕ್ಕೆ ಆಗಮಿಸಿದ ಯುವಕ ಸಾವು : ಬೈಕ್ ಅಪಘಾತದಲ್ಲಿ ಪ್ರಾಣ ಕಳೆದುಕೊಂಡ ಯುವಕ

IAS ಕನಸಿನೊಂದಿಗೆ ಧಾರವಾಡಕ್ಕೆ ಆಗಮಿಸಿದ ಯುವಕ ಸಾವು : ಬೈಕ್ ಅಪಘಾತದಲ್ಲಿ ಪ್ರಾಣ ಕಳೆದುಕೊಂಡ ಯುವಕ

Spread the love

ಧಾರವಾಡ : ವಿಜಯಪುರದಿಂದ IAS ಕನಸು ಕಟ್ಟಿಕೊಂಡು ಧಾರವಾಡದಲ್ಲಿ ತರಭೇತಿ ಪಡೆಯುತ್ತಿದ್ದ ಯುವಕನೊಬ್ಬ ಬೈಕ್ ಅಪಘಾತದಲ್ಲಿ ಮೃತಪಟ್ಟ ಘಟನೆ ಧಾರವಾಡ ನಗರದ ಮಾಡರ್ನ್ ಹಾಲ್‌ ಬಳಿ ನಡೆದಿದೆ.

ಮೃತ ಯುವಕನನ್ನು ಮಹೇಶ ಭಜಂತ್ರಿ ಎಂದು ಗುರುತಿಸಲಾಗಿದೆ. ಇನ್ನೂ ಮಹೇಶ ಭಜಂತ್ರಿ ಕಳೆದ ದಿನ ತಡ ರಾತ್ರಿ ಧಾರವಾಡ ಟೋಲ್‌ನಾಕಾ ಮಾರ್ಗವಾಗಿ ವಿದ್ಯಾಗಿರಿಯ ಬಳಿ ದಾನೇಶ್ವರಿ ನಗರ ತನ್ನ ರೂಮಗೆ ತೆರಳುತ್ತಿದ್ದರು. ಈ ವೇಳೆ ಮಾಡರ್ನ್ ಹಾಲ್ ಬಳಿ ಬರುತ್ತಿದಂತೆ ಬೈಕ್ ನಿಯಂತ್ರಣ ತಪ್ಪಿ ಫುಟ್‌ಪಾತ್ ಡಿವೈಡರ್‌ಗೆ ಬೈಕ್ ರಬ್ಬಸವಾಗಿ ಡಿಕ್ಕಿಯಾಗಿದೆ. ಇದರಿಂದ ತಲೆ ಭಾಗಕ್ಕೆ ತೀವ್ರವಾದ ಪೆಟ್ಟಾಗಿದ್ದು, ಸ್ಥಳದಲ್ಲಿಯೇ ಯುವಕ ಸಾವನಪ್ಪಿದ್ದಾನೆ‌.

ಮೃತ ಯುವಕ ಮೂಲತಃ ವಿಜಯಪುರ ಜಿಲ್ಲೆಯ ನಿವಾಸಿಯಾಗಿದ್ದು, IAS ತರಭೇತಿಗಾಗಿ ಧಾರವಾಡಕ್ಕೆ ಆಗಮಿಸಿದ್ದನ್ನು. ಧಾರವಾಡ ದಾನೇಶ್ವರಿ ನಗರದಲ್ಲಿ ರೂಮ ಮಾಡಿಕೊಂಡಿದ್ದ. ರೂಮ್ ‌ಗೆ ತೆರಳುವ ವೇಳೆ ಈ ದುರ್ಘಟನೆ ನಡೆದಿದೆ. ಘಟನೆಯ ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಧಾರವಾಡ ಸಂಚಾರಿ ಠಾಣೆಯ ಪೊಲೀಸರು ಪರಿಶೀಲನೆ ಕೈಗೊಂಡಿದ್ದಾರೆ. ಧಾರವಾಡ ಸಂಚಾರಿ ಠಾಣೆಯ ವ್ಯಾಒ್ತಿಯಲ್ಲಿ ಪ್ರಕರಣ ದಾಖಲಾಗಿದೆ.

 

About Santosh Naregal

Check Also

ಪ್ರಜ್ವಲ್ ಫೆನ್ ಡ್ರೈವ್ ಪ್ರಕರಣ ಸಂತ್ರಸ್ತರಿಗೆ ನ್ಯಾಯ ಸಿಗುವಂತಾಗಬೇಕು : ಮಾಜಿ ಸಿಎಂ ಬೊಮ್ಮಾಯಿ

Spread the loveಹುಬ್ಬಳ್ಳಿ : ಪ್ರಜ್ವಲ್ ರೇವಣ್ಣ ಫೆನ್ ಡ್ರೈವ್ ಪ್ರಕರಣದಲ್ಲಿ ನಿಷ್ಪಕ್ಷಪಾತ ತನಿಖೆ ನಡೆಯಬೇಕು. ಸಂತ್ರಸ್ತರಿಗೆ ನ್ಯಾಯ ಸಿಗುವಂತಾಗಬೇಕು …

Leave a Reply

Your email address will not be published. Required fields are marked *

[the_ad id="389"]