ಹುಬ್ಬಳ್ಳಿ : ತಮ್ಮ ಪತಿ ತನ್ನನ್ನ ಕೊಲೆ ಮಾಡಿಸಲು ಸುಪಾರಿ ಕೊಡುವುದಾಗಿ ಜೀವ ಬೆದರಿಕೆ ಹಾಕಿದ್ದಾನೆಂದು ಪತ್ನಿಯೇ ಪತಿಯ ವಿರುದ್ಧ ದೂರು ಘಟನೆ ಬೆಳಕಿಗೆ ಬಂದಿದೆ.
ಬಾಲಾಜಿ ಆಸ್ಪತ್ರೆಯ ಡಾ.ಕ್ರಾಂತಿಕಿರಣ ಅವರ ಪತ್ನಿ ಡಾ.ಶೋಭಾ ಸುಣಗಾರ ಎಂಬುವವರೇ ದೂರನ್ನ ನೀಡಿದ್ದಾರೆ. ತನ್ನ ಪತಿಯ ಜೊತೆ ಮೂರ್ನಾಲ್ಕು ವರ್ಷದಿಂದ ಕೌಟುಂಬಿಕ ಭಿನ್ನಾಭಿಪ್ರಾಯಗಳಿವೆ. ಈ ಕಾರಣಕ್ಕೆ ನನ್ನ ಹೆಸರಿನಲ್ಲಿರುವ ಆಸ್ತಿಯನ್ನ ಬಿಟ್ಟು ಕೊಡುವಂತೆ ಪೀಡಿಸಲಾಗುತ್ತಿದೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.
ತನ್ನನ್ನ ಸುಪಾರಿ ಕೊಟ್ಟು ಕೊಲೆ ಮಾಡಿಸುವ ಜೀವ ಬೆದರಿಕೆ ಹಾಕಿದ್ದಲ್ಲದೇ, ಜೋರಾಗಿ ಗೋಡೆಗೆ ದೂಡಿ, ಒಳಪೆಟ್ಟು ಆಗುವಂತೆ ಮಾಡಲಾಗಿದೆ ಎಂದು ದೂರಿನಲ್ಲಿ ಹೇಳಲಾಗಿದೆ. ಅಷ್ಟೇ ಅಲ್ಲ, ಬಾಲಾಜಿ ಆಸ್ಪತ್ರೆಯ ಅಕೌಂಟೆಂಟ್ ಮಹೇಶ್ವರಿ ಹೊಸಗೌಡರ ಕೂಡಾ ಜೀವ ಬೆದರಿಕೆ ಹಾಕಿದ್ದಾರೆಂದು ಡಾ.ಶೋಭಾ ಸುಣಗಾರ ದೂರು ನೀಡಿದ್ದಾರೆ..
ಪ್ರಕರಣ ದಾಖಲು ಮಾಡಿಕೊಂಡಿರುವ ವಿದ್ಯಾನಗರ ಠಾಣೆಯ ಪೊಲೀಸರು ಐಪಿಸಿ ಸೆಕ್ಷನ್ 1860 (ಯು/ಎಸ್- 323, 341, 506, 34) ಅಡಿ ದೂರು ದಾಖಲಿಸಿಕೊಂಡಿದ್ದಾರೆ.