Home / ಪ್ರಮುಖ ನಗರಗಳು / ಹುಬ್ಬಳ್ಳಿ , ಧಾರವಾಡ / ಬೊಮ್ಮಾಯಿ ನೇತೃತ್ವದ ಸರ್ಕಾರ ಬಂದು ತಿಂಗಾಳಗಿದೆ ಅಷ್ಟೇ ಈಗಲೆ ಪಾಸ್ ಪೆಲ್ ಹೇಳಲು ಬರುವುದಿಲ್ಲ : ಮಾಜಿ ಸಿಎಂ ಜಗದೀಶ ಶೆಟ್ಟರ

ಬೊಮ್ಮಾಯಿ ನೇತೃತ್ವದ ಸರ್ಕಾರ ಬಂದು ತಿಂಗಾಳಗಿದೆ ಅಷ್ಟೇ ಈಗಲೆ ಪಾಸ್ ಪೆಲ್ ಹೇಳಲು ಬರುವುದಿಲ್ಲ : ಮಾಜಿ ಸಿಎಂ ಜಗದೀಶ ಶೆಟ್ಟರ

Spread the love

ಬಸವರಾಜ್ ಬೊಮ್ಮಾಯಿ‌ ಅವರ ನೇತೃತ್ವದಲ್ಲಿ ಸರ್ಕಾರ ಬಂದು ಈಗ ಒಂದು ತಿಂಗಳು‌ ಆಗಿದೆ. ಅಷ್ಟರಲ್ಲಿಯೇ ಸರ್ಕಾರ ಪಾಸ್ ಫೆಲ್ ಕುರಿತು ಹೇಳಲು ಬರುವುದಿಲ್ಲ. ಅದಕ್ಕೆ ಇನ್ನೂ ಕಾಲ ಬೆರಕಾಗುತ್ತದೆ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ ಹೇಳಿದ್ದಾರೆ.

ಹುಬ್ಬಳ್ಳಿಯ ಸೇವಾಸದನದ ಮತಗಟ್ಟೆಗೆ ಕುಟುಂಬ ಸಮೇತ ಆಗಮಿಸಿದ ಮಾಜಿ ಸಿಎಂ ಜಗದೀಶ್ ಶೆಟ್ಟರ್‌ರವರು ಸಂವಿಧಾನಿಕ ಹಕ್ಕು ಚಲಾಯಿಸಿದ ಬಳಿಕ ಮಾತನಾಡಿದ ಅವರು, ರಾಜ್ಯದಲ್ಲಿ ಬೊಮ್ಮಾಯಿ ಅವರ ನೇತೃತ್ವದ ಸರ್ಕಾರ ಉತ್ತಮವಾಗಿ ಕೆಲಸ ಮಾಡುತ್ತಿದೆ. ಇನ್ನಿಉ ಸಮಯಾವಕಾಶ ಬೇಕಾಗುತ್ತದೆ ಆಗ ಮಾತ್ರ ಬೊಮ್ಮಾಯಿ ನೇತೃತ್ವದ ಸರ್ಕಾರ ಪಾಸೋ ಅಥವಾ ಫೆಲೋ ಅಂತಾ ಹೇಳಬಹುದು. ಪಕ್ಷದಲ್ಲಿ ಹಿರಿಯರನ್ನು ಕಡೆಗಣಿಸುವುದರ ಬಗ್ಗೆ ಪಕ್ಷದ ಚೌಕಟ್ಟಿನಲ್ಲಿ ಚರ್ಚೆ ಮಾಡುತ್ತೆವೆ ಎಂದರು.

ಮುಂಬರುವ ವಿಧಾನ ಸಭಾ ಚುನಾವಣೆಯನ್ನು ಯಾರ ನೇತೃತ್ವದಲ್ಲಿ ಎದುರಿಸಬೇಕು ಅನ್ನುವುದ ಕುರಿತು ಪಕ್ಷದ ವರಿಷ್ಠರು ತೀರ್ಮಾಣ ಮಾಡುತ್ತಾರೆ. ವರಿಷ್ಠರ ತೀರ್ಮಾನದ ಮೇಲೆ ನಾವು ಕೂಡಾ ಮುಂದುವರೆಯುತ್ತೆವೆ. ಅಲ್ಲದೆ ವಿಧಾನ ಸಭಾ ಚುನಾವಣೆ ಇನ್ನುಇ ಸಾಕಷ್ಟು ದೂರವಿದೆ ಹಾಗಾಗಿ ಈಗಲೆ ಅದ ಬಗ್ಗೆ ಯಾವ ಚರ್ಚೆಗಳು ನಡೆದಿಲ್ಲ ಎಂದು ತಿಳಿಸಿದರು.

*ಹು-ಧಾ ಪಾಲಿಕೆಯಲ್ಲಿ 60 ಸ್ಥಾನ ಗೆಲ್ಲುತ್ತೇವೆ.*

82 ಸ್ಥಾನಗಳಲ್ಲಿ 60 ಕ್ಕೂ ಹೆಚ್ಚು ಸ್ಥಾನಗಳನ್ನು ಬಿಜೆಪಿ ಗೆಲ್ಲುತ್ತೇವೆ. ಟಿಕೆಟ್ ಆಕ್ಷಾಂಕಿಗಳ ಮಧ್ಯೆ ಸಾಕಷ್ಟು ಪೈಪೋಟಿ ಇತ್ತು. 700 ಕ್ಕೂ ಹೆಚ್ಚು ಜನರು ಆಕ್ಷಾಂಕಿಗಳು ಇದ್ದರು. ಕೆಲವು ಕಡೆ ಬಂಡಾಯಕೋರರು ಸ್ಪರ್ಧೆ ಮಾಡಿದ್ದಾರೆ. ಅವರ ವಿರುದ್ದ ಈಗಾಗಲೇ ಕ್ರಮ‌ಕೈಗೊಂಡಿದ್ದೇವೆ. ಬಂಡಾಯಗಾರರಿಗೆ ಜನರು ಬೆಂಬಲ ನೀಡುವುದಿಲ್ಲ. ಬೆಲೆ ಏರಿಕೆ ಬೇರೆ ಬೇರೆ ಸರ್ಕಾರ ಇದ್ದಾಗಲೂ ಆಗಿದೆ. ಬೆಲೆ ಏರಿಕೆ ಈ ಚುನಾವಣೆ ಮೇಲೆ ಯಾವುದೇ ರೀತಿಯ ಪರಿಣಾಮ ಬೀರಲ್ಲ.‌ ಎಂದು ವಿಶ್ವಾಸ ವ್ಯಕ್ತಪಡಿಸಿದರು.

*ಬಿಜೆಪಿ ಪಾಲಿಕೆ ಅಭ್ಯರ್ಥಿ ಹಾಗೂ ಕಾರ್ಯಕರ್ತರಿಗೆ ವಿಶ್ವಾಸ ತುಂಬುವ ಕಾರ್ಯ ಮಾಡಿದ್ದೇವೆ*

ಪಾಲಿಕೆ ಚುನಾವಣೆಗೆ ಬಿಜೆಪಿಯಿಂದ ಸ್ಪರ್ಧೆ ಮಾಡಿದ ಕೆಲವು ಅಭ್ಯರ್ಥಿಗಳಿ ಜೈಲಿನಿಂದ ಧಮ್ಕಿ ಹಾಕಿರುವ ಕುರಿತು ಮಾಹಿತಿ ಬಂದಿದೆ. ಆದರೆ ಅದ ಬಗ್ಗೆ ಯಾವೆಲ್ಲ ಕ್ರಮ ತೆಗೆದುಕೊಳ್ಳಬೇಕು, ಈಗಾಗಲೇ ತೆಗೆದುಕೊಂಡಿದ್ದೇವೆ‌. ಜೊತೆಗೆ ನಮ್ಮ ಪಕ್ಷದ ಪಾಲಿಕೆ ಅಭ್ಯರ್ಥಿಗಳಿಗೆ ಹಾಗೂ ಕಾರ್ಯಕರ್ತರಿಗೆ ವಿಶ್ವಾಸ ತುಂಬುವ ಕೆಸವನ್ನೂ ಕೂಡಾ ಮಾಡಲಾಗಿದೆ. ಗುಂಡಾಗಿರಿ ಹಾಗೂ ದಮ್ಕಿ ಹಾಕುವುದೆಲ್ಲ ಜನರ ಶಕ್ತಿಯ ಮುಂದೆ ಎನು ನಡೆಯುವುದಿಲ್ಲ ಎಂದರು.

About Santosh Naregal

Check Also

ಪ್ರಜ್ವಲ್ ಫೆನ್ ಡ್ರೈವ್ ಪ್ರಕರಣ ಸಂತ್ರಸ್ತರಿಗೆ ನ್ಯಾಯ ಸಿಗುವಂತಾಗಬೇಕು : ಮಾಜಿ ಸಿಎಂ ಬೊಮ್ಮಾಯಿ

Spread the loveಹುಬ್ಬಳ್ಳಿ : ಪ್ರಜ್ವಲ್ ರೇವಣ್ಣ ಫೆನ್ ಡ್ರೈವ್ ಪ್ರಕರಣದಲ್ಲಿ ನಿಷ್ಪಕ್ಷಪಾತ ತನಿಖೆ ನಡೆಯಬೇಕು. ಸಂತ್ರಸ್ತರಿಗೆ ನ್ಯಾಯ ಸಿಗುವಂತಾಗಬೇಕು …

Leave a Reply

Your email address will not be published. Required fields are marked *

[the_ad id="389"]