Home / Top News / ನಾಳೆ ಬೆಳಿಗ್ಗೆ 8 ಗಂಟೆಯಿಂದ ಕೃಷಿ ವಿವಿಯಲ್ಲಿ ಮತ ಏಣಿಕೆ; ಅಗತ್ಯ ಸಿದ್ದತೆ ಪೂರ್ಣ: ಜಿಲ್ಲಾಧಿಕಾರಿ ನಿತೇಶ ಪಾಟೀಲ

ನಾಳೆ ಬೆಳಿಗ್ಗೆ 8 ಗಂಟೆಯಿಂದ ಕೃಷಿ ವಿವಿಯಲ್ಲಿ ಮತ ಏಣಿಕೆ; ಅಗತ್ಯ ಸಿದ್ದತೆ ಪೂರ್ಣ: ಜಿಲ್ಲಾಧಿಕಾರಿ ನಿತೇಶ ಪಾಟೀಲ

Spread the love

ನಾಳೆ ಬೆಳಿಗ್ಗೆ 8 ಗಂಟೆಯಿಂದ ಕೃವಿವಿಯಲ್ಲಿ ಮತ ಏಣಿಕೆ; ಅಗತ್ಯ ಸಿದ್ದತೆ ಪೂರ್ಣ: ಜಿಲ್ಲಾಧಿಕಾರಿ ನಿತೇಶ ಪಾಟೀಲ

ಧಾರವಾಡ : ಸಪ್ಟೆಂಬರ್ 3 ರಂದು ಜರುಗಿರುವ ಹುಬ್ಬಳ್ಳಿ ಧಾರವಾಡ ಮಹಾನಗರಪಾಲಿಕೆ ಸಾರ್ವತ್ರಿಕ ಚುನಾವಣೆಯ ಮತಗಳ ಏಣಿಕೆ ಕಾರ್ಯವು ಧಾರವಾಡ ಕೃಷಿ ವಿಶ್ವವಿದ್ಯಾಲಯದಲ್ಲಿ ನಾಳೆ, ಸಪ್ಟೆಂಬರ್ 6 ರಂದು ಬೆಳಿಗ್ಗೆ 8 ಗಂಟೆಯಿಂದ ಆರಂಭವಾಗಲಿದೆ ಎಂದು ಜಿಲ್ಲಾ ಚುನಾವಣಾ ಅಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ನಿತೇಶ ಪಾಟೀಲ ತಿಳಿಸಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿರುವ ಅವರು, ನಾಳೆ ಬೆಳಿಗ್ಗೆ 8 ಗಂಟೆಯಿಂದ ಮತ ಏಣಿಕೆ ಕಾರ್ಯ ನಡೆಯಲಿದ್ದು, ಅಗತ್ಯ ಸಿದ್ದತೆ ಮಾಡಿಕೊಳ್ಳಲಾಗಿದೆ.
ಹುಬ್ಬಳ್ಳಿ ಧಾರವಾಡ ಮಹಾನಗರಪಾಲಿಕೆಯ 82 ವಾರ್ಡಗಳಿಗೆ ಸೆ.3 ರಂದು ಚುನಾವಣೆ ಜರುಗಿದ್ದು, 420 ಜನ ಅಭ್ಯರ್ಥಿಗಳು ಸ್ಪರ್ಧಿಸಿದ್ದಾರೆ.

*ಮತ ಏಣಿಕೆಗೆ 140 ಸಿಬ್ಬಂದಿ; ಮೂರು ಟೇಬಲ್:*
ನಾಳೆಯ ಮತ ಏಣಿಗೆಗಾಗಿ ಒಟ್ಟು 140 ಜನ ಸಿಬ್ಬಂದಿಗಳನ್ನು ತರಬೇತಿ ನೀಡಿ, ಸಿದ್ದಗೊಳಿಸಲಾಗಿದೆ.
ಪ್ರತಿ ಚುನಾವಣಾಧಿಕಾರಿಗೆ ಮತ ಏಣಿಕೆಗಾಗಿ ಮೂರು ಟೆಬಲ್ ಗಳನ್ನು ಮಾಡಲಾಗಿದೆ.

ಒಟ್ಟು 16 ಜನ ಚುನಾವಣಾಧಿಕಾರಿಗಳಿದ್ದು ಪ್ರತಿಯೊಬ್ಬರಿಗೆ ಮೂರು ಟೇಬಲ್ ನೀಡಲಾಗಿದ್ದು, ಪ್ರತಿ ಚುನಾವಣಾಧಿಕಾರಿ ಅಧೀನದಲ್ಲಿ ಏಕಕಾಲಕ್ಕೆ ಮೂರು ವಾರ್ಡ್ ಗಳ ಮತ ಏಣಿಕೆ ಕಾರ್ಯ ಆರಂಭವಾಗುತ್ತದೆ.
16 ರೂ ಜನ ಚುನಾವಣಾಧಿಕಾರಿಗಳು ಸೇರಿ ಒಟ್ಟು 48 ವಾರ್ಡ್ ಗಳ ಮತ ಏಣಿಕೆ ಕಾರ್ಯ ಏಕಕಾಲಕ್ಕೆ ಆರಂಭವಾಗುತ್ತದೆ.
ಹೀಗೆ ಆಯಾ ವಾರ್ಡ್ ಮತ ಏಣಿಕೆ ಪೂರ್ಣಗೊಂಡ ನಂತರ, ಮತ್ತೊಂದು ವಾರ್ಡ್ ನ ಮತ ಏಣಿಕೆ ಆರಂಭಿಸುತ್ತಾರೆ. ಮತ್ತು ಚುನಾವಣಾಧಿಕಾರಿಗಳು ತಮ್ಮ ವಾರ್ಡ ಗಳ ಫಲಿತಾಂಶವನ್ನು ಘೋಷಿಸುತ್ತಾರೆ.

*ಒಬ್ಬ ಅಭ್ಯರ್ಥಿ ಪರವಾಗಿ ಒಬ್ಬರಿಗೆ ಮಾತ್ರ ಅವಕಾಶ:*
ಮತ ಏಣಿಕಾ ಕೇಂದ್ರಕ್ಕೆ ಮತ ಮತ ಏಣಿಕಾ ಏಜಂಟ್, ಸ್ಪರ್ಧಿಸಿರುವ ಅಭ್ಯರ್ಥಿ ಮತ್ತು ಚುನಾವಣಾ ಏಜೆಂಟ್ ಮಾತ್ರ ಬರಲು ಅವಕಾಶವಿದೆ. ಮತ್ತು ಮತಗಳ ಏಣಿಕಾ ಟೇಬಲ್ ಗೆ ಪ್ರತಿ ವಾರ್ಡ್ ನ ಮತ ಏಣಿಕೆಗಾಗಿ ಆ ವಾರ್ಡ್ ಗೆ ಸ್ಪರ್ಧಿಸಿರುವ ಅಭ್ಯರ್ಥಿ ಪರವಾಗಿ ಒಬ್ಬ ಮತ ಏಣಿಕಾ ಏಜೆಂಟ್ ಅಥವಾ ಚುನಾವಣಾ ಏಜೆಂಟ್ ಅಥವಾ ಅಭ್ಯರ್ಥಿ ಮಾತ್ರ ಹಾಜರಾಗಬೇಕು. ಒಬ್ಬ ಅಭ್ಯರ್ಥಿ ಪರವಾಗಿ ಒಬ್ಬರಿಗೆ ಮಾತ್ರ ಅವಕಾಶ ನೀಡಲಾಗುತ್ತದೆ.

*ಕೋವಿಡ್ ಮಾರ್ಗಸೂಚಿ ಪಾಲನೆ ಕಡ್ಡಾಯ:*
ಮತ ಏಣಿಕಾ ಕೇಂದ್ರ ಪ್ರವೇಶಿಸುವ ಪ್ರತಿಯೊಬ್ಬರೂ ಮಾಸ್ಕ್ ಧರಿಸುವುದು ಕಡ್ಡಾಯವಾಗಿದೆ.
ಪರಸ್ಪರ ಸಾಮಾಜಿಕ ಅಂತರ ಕಾಪಾಡುವುದು ಪ್ರತಿಯೊಬ್ವರ ಕರ್ತವ್ಯ. ಎಲ್ಕರೂ ಸಹಕಾರ ನೀಡಬೇಕು. ಮತ ಏಣಿಕೆ ಕೇಂದ್ರ ಹಾಗೂ ಸುತ್ತಲಿನ ಪ್ರದೇಶದಲ್ಲಿ ಮಹಾನಗರ ಪೊಲೀಸ್ ಆಯುಕ್ತ ಲಾಬುರಾಮ ಅವರ ನೇತೃತ್ವದಲ್ಲಿ ಅಗತ್ಯ ಪೊಲೀಸ್ ಬಂದೊಬಸ್ತ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ನಿತೇಶ ಪಾಟೀಲ ಅವರು ತಿಳಿಸಿದ್ದಾರೆ.

About Santosh Naregal

Check Also

ಪ್ರಜ್ವಲ್ ಫೆನ್ ಡ್ರೈವ್ ಪ್ರಕರಣ ಸಂತ್ರಸ್ತರಿಗೆ ನ್ಯಾಯ ಸಿಗುವಂತಾಗಬೇಕು : ಮಾಜಿ ಸಿಎಂ ಬೊಮ್ಮಾಯಿ

Spread the loveಹುಬ್ಬಳ್ಳಿ : ಪ್ರಜ್ವಲ್ ರೇವಣ್ಣ ಫೆನ್ ಡ್ರೈವ್ ಪ್ರಕರಣದಲ್ಲಿ ನಿಷ್ಪಕ್ಷಪಾತ ತನಿಖೆ ನಡೆಯಬೇಕು. ಸಂತ್ರಸ್ತರಿಗೆ ನ್ಯಾಯ ಸಿಗುವಂತಾಗಬೇಕು …

Leave a Reply

Your email address will not be published. Required fields are marked *

[the_ad id="389"]