ಧಾರವಾಡ್ : ನಾಯಿಗಳು ಹಿಂಡು ಏಕಾಏಕಿ ಬಾಲಕನ ಮೇಲೆ ದಾಳಿ ನಡೆಸಿದ ಪರಿಣಾಮ ಆ ಬಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಹೃದಯ ವಿದ್ರಾವಕ ಘಟನೆ ಧಾರವಾಡದಲ್ಲಿ ನಡೆದಿದೆ.
ಧಾರವಾಡ ಹೊರವಲಯದ ನವಲೂರು ಗ್ರಾಮದ ರೈಲು ನಿಲ್ದಾಣದ ಬಳಿ ಈ ಘಟನೆ ನಡೆದಿದೆ. ಬಾಬುಲ್ ರಾಠೋಡ್ ಎಂಬ ಆರು ವರ್ಷದ ಬಾಲಕನೇ ನಾಯಿಗಳ ದಾಳಿಯಿಂದ ಮೃತಪಟ್ಟ ಬಾಲಕ.
ಬೆಳಿಗ್ಗೆ ಪೋಷಕರು ತಿಂಡಿ ತಿನ್ನಲೆಂದು ಬಾಲಕನನ್ನು ಶೆಡ್ನಲ್ಲಿ ಬಿಟ್ಟು ಹೋಗಿದ್ದರು. ಈ ವೇಳೆ ಏಳೆಂಟು ನಾಯಿಗಳು ಆ ಬಾಲಕನ ಮೇಲೆ ಏಕಾಏಕಿ ದಾಳಿ ನಡೆಸಿವೆ. ಅವುಗಳ ದಾಳಿಯಿಂದ ಬಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ವಿದ್ಯಾಗಿರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.