Home / Top News / ಯಡಿಯೂರಪ್ಪ-ಕೇಂದ್ರ ನಾಯಕರ ಮಧ್ಯೆ ಏನು ಮಾತುಕತೆ ಆಗಿದೆ ಗೊತ್ತಿಲ್ಲ- ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

ಯಡಿಯೂರಪ್ಪ-ಕೇಂದ್ರ ನಾಯಕರ ಮಧ್ಯೆ ಏನು ಮಾತುಕತೆ ಆಗಿದೆ ಗೊತ್ತಿಲ್ಲ- ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

Spread the love

ಹುಬ್ಬಳ್ಳಿ : ರಾಜ್ಯ ರಾಜಕಾರಣದ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ. ಮುಖ್ಯಮಂತ್ರಿಗಳು ಈಗಾಗಲೇ ತಮ್ಮ ಹೇಳಿಕೆ ನೀಡಿದ್ದಾರೆ. ಯಡಿಯೂರಪ್ಪ ಮತ್ತು ಕೇಂದ್ರ ನಾಯಕರ ಮಧ್ಯೆ ಏನು ಮಾತುಕತೆ ನಡೆದಿದೆ ಹಾಗೂ ನಡೆಯುತ್ತಿದೆ ಅದರ ವಿವರ ನನಗೆ ಗೊತ್ತಿಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದರು.

ನಗರದಲ್ಲಿಂದು ಮಾಧ್ಯಮದ ಪ್ರತಿಕ್ರಿಯೆ ನೀಡಿದ ಅವರು, ವರಿಷ್ಠರ ಜೊತೆಗೆ ಏನೇ ಮಾತುಕತೆ ನಡೆದಿದ್ದರು, ಅದೂ ಯಡಿಯೂರಪ್ಪ ಹಾಗೂ ಕೇಂದ್ರ ನಾಯಕರಿಗೆ ಮಾತ್ರ ಗೊತ್ತು. ನನ್ನನ್ನು ಮುಖ್ಯಮಂತ್ರಿ ಮಾಡುತ್ತಾರೆ ಎಂಬ ಬಗ್ಗೆ ಯಾರು ನನ್ನ ಜೊತೆ ಚರ್ಚೆ ಮಾಡಿಲ್ಲ ಎಂದರು.

ಪಕ್ಷದ ರಾಷ್ಟ್ರೀಯ ಅಧ್ಯಕ್ಷರಿದ್ದಾರೆ, ನರೇಂದ್ರ ಮೋದಿ‌ ಇದ್ದಾರೆ ನಿರ್ಧಾರ ಅವರು ತೆಗೆದುಕೊಳ್ಳುತ್ತಾರೆ ಎಂದ ಅವರು, ಮುಖ್ಯಮಂತ್ರಿ ನೀವು ಆಗ್ತೀರಾ..? ಎಂಬ ಪ್ರಶ್ನೆಗೆ ನೀವೆ ಹೇಳಬೇಕು ಎಂದು ನಕ್ಕು ಸುಮ್ಮನಾಗಿದ್ದಾರೆ.

ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಏನನ್ನೂ ಬಿಟ್ಟಕೊಡದ ಪ್ರಹ್ಲಾದ್ ಜೋಶಿ, ಎಲ್ಲ ಪ್ರಶ್ನೆಗಳಿಗೆ ಉತ್ತರಿಸಲು ನಾನು ಸೂಕ್ತ ವ್ಯಕ್ತಿ ಅಲ್ಲ ಎಂದು ಪ್ರತಿಕ್ರಿಯೆ ನೀಡಿದ್ದಾರೆ.

About Santosh Naregal

Check Also

ಡಾ.ರಾಜಕುಮಾರ್ ಅಭಿಮಾನಿಗಳಿಂದ ಸಮಸ್ತ ನಾಡಿನ ಜನತೆಗೆ ದೀಪಾವಳಿ ಹಬ್ಬದ ಶುಭಾಶಯಗಳು

Spread the loveಸಂತೋಷ, ಸಮೃದ್ಧ ಮತ್ತು ಸದಾ ನೆನಪಿನಲ್ಲಿ ಉಳಿಯುವ ದೀಪಾವಳಿ ನಿಮ್ಮದಾಗಲಿ, ದೀಪಾವಳಿಯ ಬೆಳಕಿನಂತೆ ನಿಮ್ಮ ಜೀವನದಲ್ಲೂ ಬೆಳಕು …

Leave a Reply

Your email address will not be published. Required fields are marked *

[the_ad id="389"]