Home / ಪ್ರಮುಖ ನಗರಗಳು / ಹುಬ್ಬಳ್ಳಿ , ಧಾರವಾಡ / ಉತ್ತರ ಕರ್ನಾಟಕಕ್ಕೆ ಚೆನ್ನಮ್ಮನ ಕರ್ನಾಟಕವೆಂದು ನಾಮಕರಣ ಮಾಡಲು ಕೈ ವಕ್ತಾರ ಗಂಗಾಧರ ದೊಡ್ಡವಾಡ ಒತ್ತಾಯ

ಉತ್ತರ ಕರ್ನಾಟಕಕ್ಕೆ ಚೆನ್ನಮ್ಮನ ಕರ್ನಾಟಕವೆಂದು ನಾಮಕರಣ ಮಾಡಲು ಕೈ ವಕ್ತಾರ ಗಂಗಾಧರ ದೊಡ್ಡವಾಡ ಒತ್ತಾಯ

Spread the love

ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರು ತಮ್ಮ ಅಧಿಕಾರವಧಿಯಲ್ಲಿ ಹೈದರಾಬಾದ್ ಕರ್ನಾಟಕದ ಬೀದರ್, ಯಾದಗಿರಿ, ಗುಲ್ಬರ್ಗಾ, ಬಿಜಾಪುರ, ಬಳ್ಳಾರಿ, ಕೊಪ್ಪಳ, ವಿಜಯನಗರ ಜಿಲ್ಲೆಗಳನ್ನು ಸೇರಿಸಿ ಕಲ್ಯಾಣ ಕರ್ನಾಟಕವೆಂದು ಮರು ನಾಮಕರಣ ಮಾಡಿ ಕರ್ನಾಟಕದ ರಾಜಕೀಯ ಇತಿಹಾಸದಲ್ಲಿ ಹೊಸದೊಂದು ಚರಿತ್ರೆಯನ್ನು ಬರೆದಿದ್ದಾರೆ ಎಂದು ಹುಬ್ಬಳ್ಳಿ-ಧಾರವಾಡ ಮಹಾನಗರ ಜಿಲ್ಲಾ ಕಾಂಗ್ರೆಸ್ ಮಾಧ್ಯಮ ವಕ್ತಾರ ಗಂಗಾಧರ ದೊಡವಾಡ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿ ಅದೇ ರೀತಿ ಉತ್ತರ ಕರ್ನಾಟಕದ ಬೆಳಗಾವಿ, ಚಿಕ್ಕೋಡಿ, ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ ಜಿಲ್ಲೆಗಳನ್ನು ಸೇರಿಸಿ *ಚೆನ್ನಮ್ಮನ ಕರ್ನಾಟಕ* ಎಂದು ಮರು ನಾಮಕರಣ ಮಾಡಬೇಕೆಂದು ನೂತನ ಮುಖ್ಯಮಂತ್ರಿ ಸನ್ಮಾನ್ಯ ಶ್ರೀ ಬಸವರಾಜ ಬೊಮ್ಮಾಯಿ ಯವರನ್ನು ಒತ್ತಾಯಿಸಿದ್ದಾರೆ ಸ್ವಾತಂತ್ರ್ಯದ ಬೆಳ್ಳಿಚುಕ್ಕಿ ಮಹಿಳಾ ಕುಲಕ್ಕೆ ಸ್ಫೂರ್ತಿಯಾಗಿರುವ ಕಿತ್ತೂರ ನಾಡಿನ ಸಾಮ್ರಾಜ್ಞೆ ಚೆನ್ನಮ್ಮ ತಾಯಿಯವರ ಹೆಸರನ್ನು ಅಜರಾಮರವಾಗಿಸುವ ನಿಟ್ಟಿನಲ್ಲಿ ತಕ್ಷಣವೇ ಕ್ರಮ ಕೈಗೊಂಡು *ಚೆನ್ನಮ್ಮನ ಕರ್ನಾಟಕ* ವೆಂದು ಮರುನಾಮಕರಣ ಮಾಡಿ ಈ ನೆಲದ ಸ್ವಾತಂತ್ರ್ಯಕ್ಕಾಗಿ ಆಂಗ್ಲ ರೊಂದಿಗೆ ಸೆಣಸ್ಯಾಡಿ ತಮ್ಮ ಸರ್ವಸ್ವವನ್ನೇ ಕಳೆದುಕೊಂಡ ಮಹಾನ್ ದೇಶಭಕ್ತರಿಗೆ ಈ ತೆರನಾದ ಗೌರವ ಸಲ್ಲಿಸಬೇಕೆಂದು ಗಂಗಾಧರ ದೊಡವಾಡ ಪತ್ರಿಕಾ ಪ್ರಕಟಣೆಯ ಮೂಲಕ ಒತ್ತಾಯಿಸಿದ್ದಾರೆ.

About Santosh Naregal

Check Also

ಪ್ರಜ್ವಲ್ ಫೆನ್ ಡ್ರೈವ್ ಪ್ರಕರಣ ಸಂತ್ರಸ್ತರಿಗೆ ನ್ಯಾಯ ಸಿಗುವಂತಾಗಬೇಕು : ಮಾಜಿ ಸಿಎಂ ಬೊಮ್ಮಾಯಿ

Spread the loveಹುಬ್ಬಳ್ಳಿ : ಪ್ರಜ್ವಲ್ ರೇವಣ್ಣ ಫೆನ್ ಡ್ರೈವ್ ಪ್ರಕರಣದಲ್ಲಿ ನಿಷ್ಪಕ್ಷಪಾತ ತನಿಖೆ ನಡೆಯಬೇಕು. ಸಂತ್ರಸ್ತರಿಗೆ ನ್ಯಾಯ ಸಿಗುವಂತಾಗಬೇಕು …

Leave a Reply

Your email address will not be published. Required fields are marked *

[the_ad id="389"]