Home / ರಾಜಕೀಯ / ಬಿಜೆಪಿ ವಿಫಲವಾಗಿದೆ ನಮಗೊಂದು ಅವಕಾಶ ನೀಡಿ ಅಭಿವೃದ್ಧಿ ಅರ್ಥ ಮಾಡಿಸುತ್ತೇವೆ:ಎಚ್.ಡಿ.ಬಸವರಾಜ

ಬಿಜೆಪಿ ವಿಫಲವಾಗಿದೆ ನಮಗೊಂದು ಅವಕಾಶ ನೀಡಿ ಅಭಿವೃದ್ಧಿ ಅರ್ಥ ಮಾಡಿಸುತ್ತೇವೆ:ಎಚ್.ಡಿ.ಬಸವರಾಜ

Spread the love

ಹುಬ್ಬಳ್ಳಿ : ಭಾರತೀಯ ಜನತಾ ಪಕ್ಷ ಸಾರ್ವಜನಿಕರ ಸೇವೆಯ ಹೆಸರಿನಲ್ಲಿ ಅಧಿಕಾರದ ಚುಕ್ಕಾಣಿ ಹಿಡಿದಿದೆ. ಆದರೆ ಜನರ ಸೇವೆ ಮಾಡುವಲ್ಲಿ ಅಧಿಕಾರ ನಡೆಸುವಲ್ಲಿ ವಿಫಲವಾಗಿದ್ದು, ಬರುವ ಚುನಾವಣೆಯಲ್ಲಿ ಆಮ್ ಆದ್ಮಿಗೆ ಪಾರ್ಟಿಗೆ ಒಂದು ಅವಕಾಶ ನೀಡಿ ಬದಲಾವಣೆಗೆ ಮುನ್ನುಡಿ ಬರೆಯಬೇಕೆಂದು ಮಾಜಿ ಶಾಸಕರು ಹಾಗೂ ಆಮ್ ಆದ್ಮಿ ಪಕ್ಷದ ಮುಖಂಡರಾದ ಎಚ್.ಡಿ.ಬಸವರಾಜ ಹೇಳಿದರು.

ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಮುಂಬರುವ ಪಾಲಿಕೆ ಚುನಾವಣೆಯಲ್ಲಿ ಆಮ್ ಆದ್ಮಿ ಎಲ್ಲ 82 ವಾರ್ಡ್ ಗಳಿಂದ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸುತ್ತಿದ್ದು, ಅಭಿವೃದ್ಧಿಯ ದೂರದೃಷ್ಟಿಯನ್ನು ಇಟ್ಟುಕೊಂಡು ಚುನಾವಣೆ ಮಾಡುವ ನಿರ್ಧಾರವನ್ನು ಪಕ್ಷ ತೆಗೆದುಕೊಂಡಿದೆ. ಅಲ್ಲದೆ ಅವಳಿನಗರದಲ್ಲಿ ಅಧಿಕಾರರೂಢ ಬಿಜೆಪಿ ಸರ್ಕಾರ ಜನರಿಗೆ ಭಾರಿ ಅನ್ಯಾಯವನ್ನು ಮಾಡಿರುವುದು ನಮ್ಮ‌ ಗಮನಕ್ಕೆ ಬಂದಿದೆ ಎಂದರು.

ಇನ್ನೂ ಕಳೆದ ಎರಡು ವರ್ಷಗಳಲ್ಲಿ ರಾಜ್ಯ ಸರ್ಕಾರದಲ್ಲಿ ಬಿಜೆಪಿ ಅವ್ಯವಸ್ಥೆಯಿಂದ ಸರ್ಕಾರ ನಡೆಸುವಲ್ಲಿ ಸಂಪೂರ್ಣ ವಿಫಲವಾಗಿದೆ. ಈ ನಿಟ್ಟಿನಲ್ಲಿ ರಾಜ್ಯ ರಾಜಕಾರಣದಲ್ಲಿ ಹೊಸ ಸಂಚಲನ ಸೃಷ್ಟಿಸುವ ಹಿನ್ನಲೆಯಲ್ಲಿ ಆಮ್ ಆದ್ಮಿಗೆ ಅವಕಾಶ ನೀಡಬೇಕು ಎಂದು ಅವರು ಹೇಳಿದರು.

About Santosh Naregal

Check Also

ಪ್ರಜ್ವಲ್ ಫೆನ್ ಡ್ರೈವ್ ಪ್ರಕರಣ ಸಂತ್ರಸ್ತರಿಗೆ ನ್ಯಾಯ ಸಿಗುವಂತಾಗಬೇಕು : ಮಾಜಿ ಸಿಎಂ ಬೊಮ್ಮಾಯಿ

Spread the loveಹುಬ್ಬಳ್ಳಿ : ಪ್ರಜ್ವಲ್ ರೇವಣ್ಣ ಫೆನ್ ಡ್ರೈವ್ ಪ್ರಕರಣದಲ್ಲಿ ನಿಷ್ಪಕ್ಷಪಾತ ತನಿಖೆ ನಡೆಯಬೇಕು. ಸಂತ್ರಸ್ತರಿಗೆ ನ್ಯಾಯ ಸಿಗುವಂತಾಗಬೇಕು …

Leave a Reply

Your email address will not be published. Required fields are marked *

[the_ad id="389"]