Home / Top News / ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಪೌರಕಾರ್ಮಿಕರ ಪ್ರತಿಭಟನೆ

ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಪೌರಕಾರ್ಮಿಕರ ಪ್ರತಿಭಟನೆ

Spread the love

ಹುಬ್ಬಳ್ಳಿ : ಪೌರ ಕಾರ್ಮಿಕರ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಧಾರವಾಡ ಜಿಲ್ಲಾ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡಗಳ ಪೌರಕಾರ್ಮಿಕರ ಮತ್ತು ನೌಕರರ ಸಂಘ ವತಿಯಿಂದ ಪ್ರತಿಭಟನೆ ನಡೆಸಲಾಯಿತು .

ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯಲ್ಲಿ ಪ್ರತಿಭಟನೆ ನಡೆಸಿದ ಪೌರಕಾರ್ಮಿಕರು ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯಲ್ಲಿ ಸ್ವಚ್ಛತಾ ಕಾರ್ಯ ನಿರ್ವಹಿಸುತ್ತಿರುವ ಪೌರ ಕಾರ್ಮಿಕರಿಗೆ ಸರ್ಕಾರದ ಆದೇಶದಂತೆ ೧೪ ಅಂಶಗಳನ್ನು ಕಾರ್ಮಿಕ ಪ್ರವಧಾನಗಳನ್ನು ಒದಗಿಸುವಂತೆ ಹಾಗೂ ಮಹಾನಗರ ಪಾಲಿಕೆ ೮ ತಿಂಗಳಿಂದ ಪೌರಕಾರ್ಮಿಕರಿಗೆ ಬೆಳಗಿನ ಉಪಾಹಾರ ಪೂರೈಕೆ ಸ್ಥಗಿತಗೊಳಿಸಿದೆ ಕೂಡಲೇ ಉತ್ತಮ ಗುಣಮಟ್ಟದ ಬೆಳಗಿನ ಉಪಾಹಾರ ವನ್ನು ಪೌರಕಾರ್ಮಿಕರಿಗೆ ಪೂರೈಸುವಂತೆ ಹಾಗೂ
ಪಾಲಿಕೆ ಆವರಣದಲ್ಲಿ ಪೌರ ಕಾರ್ಮಿಕರ ಸಂಘದ ಕಚೇರಿ ಕಟ್ಟಡ ಒದಗಿಸಬೇಕೆಂದು ಆಗ್ರಹಿಸಿದರು . ಹಾಗೂ ೬೦ ವರ್ಷ ಮೇಲ್ಪಟ್ಟ ಪೌರಕಾರ್ಮಿಕರಿಗೆ ೧೦ಬಲಕ್ಷ ಪರಿಹಾರವ ತಿಂಗಳಿಗೆ ೧೫೦೦ ಪಿಂಚಣಿ ನೀಡಬೇಕೆಂದು ಆಗ್ರಹಿಸಿದರು .

ಪ್ರತಿಭಟನೆಯಲ್ಲಿ ಗಂಗಮ್ಮ ಸಿದ್ರಾಮಪುರ ,ಗಾಳೆಪ್ಪ ದ್ವಾಸಲಕೇರಿ ,ವಿಜಯಕುಮಾರ್ ಗಬ್ಬೂರ್ , ಮಂಜುನಾಥ್ ನಾಗನೂರ, ರೇಣುಕಾ ಬಳ್ಳಾರಿ ಇತರರು ಭಾಗಿಯಾಗಿದ್ದರು.

About Santosh Naregal

Check Also

ಡಾ.ರಾಜಕುಮಾರ್ ಅಭಿಮಾನಿಗಳಿಂದ ಸಮಸ್ತ ನಾಡಿನ ಜನತೆಗೆ ದೀಪಾವಳಿ ಹಬ್ಬದ ಶುಭಾಶಯಗಳು

Spread the loveಸಂತೋಷ, ಸಮೃದ್ಧ ಮತ್ತು ಸದಾ ನೆನಪಿನಲ್ಲಿ ಉಳಿಯುವ ದೀಪಾವಳಿ ನಿಮ್ಮದಾಗಲಿ, ದೀಪಾವಳಿಯ ಬೆಳಕಿನಂತೆ ನಿಮ್ಮ ಜೀವನದಲ್ಲೂ ಬೆಳಕು …

Leave a Reply

Your email address will not be published. Required fields are marked *

[the_ad id="389"]