Home / Top News / ಹು-ಧಾ ಪಾಲಿಕೆ ಕಚೇರಿ ಹಾಗೂ ಕಾರುಗಳು ಮೇಲೆ ಕಲ್ಲು ತೂರಾಟ ಮಾಡಿದ ಕಿಡಿಗೇಡಿ

ಹು-ಧಾ ಪಾಲಿಕೆ ಕಚೇರಿ ಹಾಗೂ ಕಾರುಗಳು ಮೇಲೆ ಕಲ್ಲು ತೂರಾಟ ಮಾಡಿದ ಕಿಡಿಗೇಡಿ

Spread the love

ಹುಬ್ಬಳ್ಳಿ : ನಗರದ ಮಹಾನಗರ ಪಾಲಿಕೆ ಕಚೇರಿಯ ಮೇಲೆ ಹಾಗೂ ಆವರಣದಲ್ಲಿ ನಿಲ್ಲಿಸಿದ್ದ ವಾಹನಗಳ ಮೇಲೆ ಕಲ್ಲುತೂರಾಟ ನಡೆಸಿದ ಪರಿಣಾಮ ಕಚೇರಿ ಕಿಡಕಿಯ ಗಾಜು ಹಾಗೂ ವಾಹನಗಳು ಜಖಂಗೊಂಡ ಘಟನೆ ನಡೆದಿದೆ.

ಹುಬ್ಬಳ್ಳಿಯ ಗಣೇಶ ಪೇಟ್ ನಿವಾಸಿ ಮೊಹ್ಮದ್ ಎಂಬಾತ ಇಂದು ಬೆಳಿಗ್ಗೆ ಮಹಾನಗರ ಪಾಲಿಕೆ ಕಚೇರಿಗೆ ಬಂದವನೇ,ಕಲ್ಲುಗಳಿಂದ ಕಚೇರಿ ಕಿಡಕಿ ಹಾಗೂ ಎರಡು ಕಾರುಗಳು ಮೇಲೆ ಕಲ್ಲು ತೂರಾಟ ನಡೆಸಿದ್ದಾನೆ.

ಕೂಡಲೇ ಅಲ್ಲೇ ಇದ್ದ ಸೆಕ್ಯೂರಿಟಿ ಸಿಬ್ಬಂದಿ ಉಪನಗರ ಪೊಲೀಸ್ ಠಾಣೆಗೆ ಮಾಹಿತಿಯನ್ನು ರವಾನಿಸಿದ್ದು ಸ್ಥಳಕ್ಕೆ ಆಗಮಿಸಿದ ಉಪನಗರ ಠಾಣೆಯ ಪೊಲೀಸರು ಆರೋಪಿ ಮೊಹ್ಮದ್ ನನ್ನು ಠಾಣೆಗೆ ಕರೆದುಕೊಂಡು ಹೋಗಿ ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ.

About Santosh Naregal

Check Also

ಡಾ.ರಾಜಕುಮಾರ್ ಅಭಿಮಾನಿಗಳಿಂದ ಸಮಸ್ತ ನಾಡಿನ ಜನತೆಗೆ ದೀಪಾವಳಿ ಹಬ್ಬದ ಶುಭಾಶಯಗಳು

Spread the loveಸಂತೋಷ, ಸಮೃದ್ಧ ಮತ್ತು ಸದಾ ನೆನಪಿನಲ್ಲಿ ಉಳಿಯುವ ದೀಪಾವಳಿ ನಿಮ್ಮದಾಗಲಿ, ದೀಪಾವಳಿಯ ಬೆಳಕಿನಂತೆ ನಿಮ್ಮ ಜೀವನದಲ್ಲೂ ಬೆಳಕು …

Leave a Reply

Your email address will not be published. Required fields are marked *

[the_ad id="389"]