ಹುಬ್ಬಳ್ಳಿ : ಪೆಟ್ರೋಲ್ ಹಾಗೂ ಡಿಸೇಲ್ ಬೆಲೆ ಏರಿಕೆ ವಿರೋಧಿಸಿ ಕೆಪಿಸಿಸಿ ಆದೇಶದ ಮೇರೆಗೆ 100-ನಾಟೌಟ್ ಅಭಿಯಾನದ ಹುಬ್ಬಳ್ಳಿ-ಧಾರವಾಡ ಉಸ್ತುವಾರಿಗಳಾದ ಆರ್.ವಿ.ದೇಶಪಾಂಡೆ ಅವರ ನೇತೃತ್ವದಲ್ಲಿಂದು ನವನಗರದ ಪೆಟ್ರೋಲ್ ಬಂಕ್ ನಲ್ಲಿ ಪ್ರತಿಭಟನೆ ನಡೆಸಲಾಯಿತು.
ಹುಬ್ಬಳ್ಳಿ: ಧಾರವಾಡ ಮಹಾನಗರ ಜಿಲ್ಲಾ ಕಾಂಗ್ರೆಸ್ ಸಮಿತಿಯ ಆಶ್ರಯದಲ್ಲಿ ಧಾರವಾಡ ಪಶ್ಚಿಮ-74 ವಿಧಾನ ಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ನವನಗರ ಬ್ಲಾಕ್ ಕಾಂಗ್ರೆಸ್ ಸಮಿತಿಯ ಸಹಯೋಗದೊಂದಿಗೆ ವಾರ್ಡ ನಂ 29 ರಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವಿರುದ್ಧ ಕೋವಿಡ್-19 ನಿಯಮಾವಳಿಗಳ ಪ್ರಕಾರ 100-ನಾಟೌಟ್ ಎಂಬ ಘೋಷಣೆಯೊಂದಿಗೆ ಪ್ರತಿಭಟನೆ ನಡೆಸಲಾಯಿತು.
ಪ್ರತಿಭಟನೆಯಲ್ಲಿ ಶಾಸಕ ಪ್ರಸಾದ್ ಅಬ್ಬಯ್ಯ, ಶಾಸಕಿ ಕುಸುಮಾ ಶಿವಳ್ಳಿ, ಕಾಂಗ್ರೆಸ್ ಮುಖಂಡರಾದ್ ಅಲ್ತಾಫ್ ಹಳ್ಳುರ್, ದೀಪಾ ಗೌರಿ , ಹಾಗೂ ಕಾರ್ಯಕರತರು ಭಾಗಿಯಾಗಿದ್ದರು.