Home / ಪ್ರಮುಖ ನಗರಗಳು / ಹುಬ್ಬಳ್ಳಿ , ಧಾರವಾಡ / ಮಳೆಯ ರಭಸಕ್ಕೆ ಧರೆಗೆ ಉರುಳಿದ ಮರ: ಸಂಪರ್ಕ ಕಡಿತ

ಮಳೆಯ ರಭಸಕ್ಕೆ ಧರೆಗೆ ಉರುಳಿದ ಮರ: ಸಂಪರ್ಕ ಕಡಿತ

Spread the love

ಹುಬ್ಬಳ್ಳಿ : ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಸತತವಾಗಿ ಸುರಿಯುತ್ತಿರುವ ಮಳೆ ನಗರದ ಬಹುತೇಕ ಕಡೆಗಳಲ್ಲಿ ಅವಾಂತರ ಸೃಷ್ಟಿಸುತ್ತಿದೆ.

ಹೌದು.. ಸತತವಾಗಿ ಸುರಿದ ಮಳೆಗೆ ಮರವೊಂದು ಧರೆಗೆ ಉರುಳಿದ ಘಟನೆ ಭವಾನಿ ನಗರದ ಆಕೃತಿ ಅಪಾರ್ಟ್ ಮೆಂಟ್ ಪಕ್ಕದಲ್ಲಿ ನಡೆದಿದೆ. ಮರವು ವಿದ್ಯುತ್ ಕಂಬದ ಮೇಲೆ ಬಿದ್ದ ಪರಿಣಾಮ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. ನಿತ್ಯ ನೂರಾರು ವಾಹನ ಸವಾರರ ಓಡಾಡುವ ರಸ್ತೆಯಲ್ಲಿಯೇ ಮರವು ನೆಲಕ್ಕೆ ಬಿದ್ದಿದ್ದು ಸಾರ್ವಜನಿಕರು ಪರದಾಡುವಂತಾಗಿದೆ.

ಮಳೆ ಆಗುತ್ತಿದ್ದ ಪರಿಣಾಮ ಜನರ ಓಡಾಟ ವಿರಳವಿದ್ದಾಗ ಮರ ಬಿದ್ದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಭವಾನಿ‌ನಗರ- ದೇಶಪಾಂಡೆ ನಗರ ಸಂಪರ್ಕ ಕಲ್ಪಿಸುವ ರಸ್ತೆ ಬಂದ್ ಆಗಿದೆ.

About Santosh Naregal

Check Also

ಪ್ರಜ್ವಲ್ ಫೆನ್ ಡ್ರೈವ್ ಪ್ರಕರಣ ಸಂತ್ರಸ್ತರಿಗೆ ನ್ಯಾಯ ಸಿಗುವಂತಾಗಬೇಕು : ಮಾಜಿ ಸಿಎಂ ಬೊಮ್ಮಾಯಿ

Spread the loveಹುಬ್ಬಳ್ಳಿ : ಪ್ರಜ್ವಲ್ ರೇವಣ್ಣ ಫೆನ್ ಡ್ರೈವ್ ಪ್ರಕರಣದಲ್ಲಿ ನಿಷ್ಪಕ್ಷಪಾತ ತನಿಖೆ ನಡೆಯಬೇಕು. ಸಂತ್ರಸ್ತರಿಗೆ ನ್ಯಾಯ ಸಿಗುವಂತಾಗಬೇಕು …

Leave a Reply

Your email address will not be published. Required fields are marked *

[the_ad id="389"]