Home / ಪ್ರಮುಖ ನಗರಗಳು / ಹುಬ್ಬಳ್ಳಿ , ಧಾರವಾಡ / ಲಾಕ್ ಡೌನ್ ಸಡಿಲಿಕೆ ಗೊಂದಲ ಅಧಿಕಾರಿಗಳ ಜೊತೆಗೆ ಸಭೆ ನಡೆಸಿದ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್

ಲಾಕ್ ಡೌನ್ ಸಡಿಲಿಕೆ ಗೊಂದಲ ಅಧಿಕಾರಿಗಳ ಜೊತೆಗೆ ಸಭೆ ನಡೆಸಿದ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್

Spread the love

ಹುಬ್ಬಳ್ಳಿ : ಧಾರವಾಡ ಜಿಲ್ಲೆಯಲ್ಲಿ ಒಂದು ವಾರದಿಂದ ಕೋವಿಡ್ ಪಾಸಿಟಿವಿಟಿ ದರ ಶೇ.4.1 ರಕ್ಕಿ ಕಡಿಮೆಯಾಗಿದ್ರು ಸಹ ಅನ್​ಲಾಕ್​ ಆದ ಜಿಲ್ಲೆಗಳ ಪಟ್ಟಿಯಿಂದ ಹೊರಗಿ ಟ್ಟಿರುವ ಕುರಿತಂತೆ ಸರ್ಕಾರಕ್ಕೆ ವರದಿ ನೀಡುವಲ್ಲಿ ಆದ ಲೋಪದೋಷ ಕುರಿತಾಗಿ ಜಿಲ್ಲಾಧಿಕಾರಿ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳ ಜೊತೆಗೆ ದೇಶಪಾಂಡೆ ನಗರದ ಸರ್ಕ್ಯೂಟ್ ಹೌಸ್ ನಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ಭಾನುವಾರ ಸಭೆ ನಡೆಸಿದರು.
ಅನ್​ಲಾಕ್​ 2.0 ಘೋಷಣೆ ಮಾಡುವಾಗ ಸಿಎಂ ಬಿ.ಎಸ್​ ಯಡಿಯೂರಪ್ಪ 16 ಜಿಲ್ಲೆಗಳ ಪಟ್ಟಿ ಓದಿದ್ದರು. ಅದರಲ್ಲಿ ಧಾರವಾಡ ಇರಲಿಲ್ಲ. ಅನ್​ಲಾಕ್​ ಘೋಷಣೆ ಮಾಡುವಾಗ ಸಿಎಂ ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಂದ ಮಾಹಿತಿ ಪಡೆದಿದ್ದರು ಸಹ ಯಾಕೆ ವರದಿ ಸರಿಯಾಗಿ ಕಳುಹಿಸಿ ಕೊಟ್ಟಿಲ್ಲ ಯಾರಿಂದ ತಪ್ಪಾಗಿದೆ ಮತ್ತು ಇದಕ್ಕೆ ಯಾರು ಹೊಣೆಗಾರರು ಎಂಬುದನ್ನು ಸಮಗ್ರವಾಗಿ ಮಾಹಿತಿ ಪಡೆದುಕೊಂಡರು. ಧಾರವಾಡ ಜಿಲ್ಲೆಯಲ್ಲಿ ಸೋಂಕು ಕಡಿಮೆಯಾಗಿರುವ ಬಗ್ಗೆ ಡಿಸಿ ಸಿಎಂಗೆ ಮಾಹಿತಿ ನೀಡಿದ್ದರು. ಆದರೂ, ಸಿಎಂ ಅನ್​ಲಾಕ್​ ಜಿಲ್ಲೆಗಳ ಪಟ್ಟಿಯಲ್ಲಿ ಸೇರಿಸದಿರುವುದು, ಜಿಲ್ಲೆಯ ಜನರಲ್ಲಿ ಸಾಕಷ್ಟು ಗೊಂದಲಕ್ಕೆ ಒಳಗಾಗಿ ಕಾರಣವಾಗಿತ್ತು.
ಸಭೆಯಲ್ಲಿ ಜಿಲ್ಲಾಧಿಕಾರಿ ನೀತೀಶ ಪಾಟೀಲ, ಜಿಲ್ಲಾ ಆರೋಗ್ಯಧಿಕಾರಿ ಡಾ.ಯಶವಂತ ಮದನಕೇರಿ, ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮೀಷನರ್ ಲಾಬುರಾಮ್, ಎಸ್ ಪಿ ಕೃಷ್ಣ ಕಾಂತ ಮುಂತಾದವರಿದ್ದರು.

About Santosh Naregal

Check Also

ಪ್ರಜ್ವಲ್ ಫೆನ್ ಡ್ರೈವ್ ಪ್ರಕರಣ ಸಂತ್ರಸ್ತರಿಗೆ ನ್ಯಾಯ ಸಿಗುವಂತಾಗಬೇಕು : ಮಾಜಿ ಸಿಎಂ ಬೊಮ್ಮಾಯಿ

Spread the loveಹುಬ್ಬಳ್ಳಿ : ಪ್ರಜ್ವಲ್ ರೇವಣ್ಣ ಫೆನ್ ಡ್ರೈವ್ ಪ್ರಕರಣದಲ್ಲಿ ನಿಷ್ಪಕ್ಷಪಾತ ತನಿಖೆ ನಡೆಯಬೇಕು. ಸಂತ್ರಸ್ತರಿಗೆ ನ್ಯಾಯ ಸಿಗುವಂತಾಗಬೇಕು …

Leave a Reply

Your email address will not be published. Required fields are marked *

[the_ad id="389"]