Home / Top News / ಮಾಜಿ ಸಚಿವ ವಿನಯ ಕುಲಕರ್ಣಿಗೆ ಜಾಮೀನು ಮಂಜೂರು ಹಿನ್ನೆಲೆ; ಬೆಂಬಲಿಗರಿಂದ ಪಾಟಾಕಿ ಸಿಡಿಸಿ,ಸಿಹಿ ಹಂಚಿ ಸಂಭ್ರಮ

ಮಾಜಿ ಸಚಿವ ವಿನಯ ಕುಲಕರ್ಣಿಗೆ ಜಾಮೀನು ಮಂಜೂರು ಹಿನ್ನೆಲೆ; ಬೆಂಬಲಿಗರಿಂದ ಪಾಟಾಕಿ ಸಿಡಿಸಿ,ಸಿಹಿ ಹಂಚಿ ಸಂಭ್ರಮ

Spread the love

ಧಾರವಾಡ : ಧಾರವಾಡ ಜಿಲ್ಲಾ ಪಂಚಾಯತಿ ಸದಸ್ಯ ಯೋಗೇಶಗೌಡ ಕೊಲೆ ಪ್ರಕರಣದಲ್ಲಿ, ಮಾಜಿ ಸಚಿವ ವಿನಯ ಕುಲಕರ್ಣಿ ಅವರಿಗೆ ಜಾಮೀನು ಮಂಜೂರಾಗಿದ್ದು, ಈ ಹಿನ್ನೆಲೆಯಲ್ಲಿ ಧಾರವಾಡದ ವಿನಯ ಬೆಂಬಲಿಗರು ಸಂಭ್ರಮಾಚರಣೆ ಮಾಡಿದರು.

ಜಾಮೀನು ಮಂಜೂರಾಗಿರುವ ಸುದ್ದಿ ಹೋರ ಬಿಳುತ್ತಿದಂತೆ, ಧಾರವಾಡ ನಗರದ ಹೆಬ್ಬಳ್ಳಿ ಅಗಸಿಯಲ್ಲಿ ಜಮಾಯಿಸಿದ ವಿನಯ ಬೆಂಬಲಿಗರು ಪಟಾಕಿ ಸಿಡಿಸಿ, ಪರಸ್ಪರ ಸಿಹಿ ಹಂಚ್ಚಿಕೊಂಡು, ಕುಣಿದು ಸಂಭ್ರಮಿಸಿದರು.

ಮಾಜಿ ಸಚಿವ ವಿನಯ ಕುಲಕರ್ಣಿಯವರಿಗೆ ಕಳೆದ ಅಗಸ್ಟ್ 11 ರಂದು ಸುಪ್ರೀಂ ಕೋರ್ಟ್ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದ ವೇಳೆ ವಿನಯ ಬೆಂಬಲಿಗರು ಸಂಭ್ರಮಾಚರಣೆ ಮಾಡಿದರು. ಆದರೆ ಅಂದು ಕೇವಲ ಕೊಲೆ ಪ್ರಕರಣದಲ್ಲಿ ಮಾತ್ರ ಷರತ್ತು ಬದ್ಧ ಜಾಮೀನು ನೀಡಲಾಗಿತ್ತು. ಆದರೆ ಇಂದು ಅದೇ ಕೊಲೆ ಪ್ರಕರಣದ ಸಾಕ್ಷಿ ನಾಶ ಪ್ರಕರಣದಲ್ಲಿಯು ವಿನಯ ಅವರಿಗೆ ಜಾಮೀನು ಮಂಜೂರಾಗಿದ್ದು, ವಿನಯ ಬೆಂಬಲಿಗರಲ್ಲಿ ಮತ್ತಷ್ಟು ಖುಷಿ ಹೆಚ್ಚು ಮಾಡಿದೆ.

About Santosh Naregal

Check Also

ಪ್ರಜ್ವಲ್ ಫೆನ್ ಡ್ರೈವ್ ಪ್ರಕರಣ ಸಂತ್ರಸ್ತರಿಗೆ ನ್ಯಾಯ ಸಿಗುವಂತಾಗಬೇಕು : ಮಾಜಿ ಸಿಎಂ ಬೊಮ್ಮಾಯಿ

Spread the loveಹುಬ್ಬಳ್ಳಿ : ಪ್ರಜ್ವಲ್ ರೇವಣ್ಣ ಫೆನ್ ಡ್ರೈವ್ ಪ್ರಕರಣದಲ್ಲಿ ನಿಷ್ಪಕ್ಷಪಾತ ತನಿಖೆ ನಡೆಯಬೇಕು. ಸಂತ್ರಸ್ತರಿಗೆ ನ್ಯಾಯ ಸಿಗುವಂತಾಗಬೇಕು …

Leave a Reply

Your email address will not be published. Required fields are marked *

[the_ad id="389"]